<p><strong>ಕೊಪ್ಪಳ</strong>: ಹಿಂದೂ ಹಾಗೂ ಮುಸ್ಲಿಮರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೇಲೆ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ.</p><p>ಮುಸ್ಲಿಂ ಯುವಕನಿಂದ ಆಗಸ್ಟ್ 3ರಂದು ಇಲ್ಲಿನ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎನ್ನುವ ಯುವಕನ ಕೊಲೆಯಾಗಿತ್ತು. ಅವರ ಕುಟುಂಬದವರಿಗೆ ಸಾಂತ್ವಾನ ಹೇಳಲು ಆ. 10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ ‘ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ಕೊಡುತ್ತೇನೆ. ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ’ ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಟೀಕೆಗೂ ಕಾರಣವಾಗಿತ್ತು.</p><p>ಆದ್ದರಿಂದ ಇಲ್ಲಿನ ಕುವೆಂಪು ನಗರದ ನಿವಾಸಿಯಾಗಿರುವ ಅಬ್ದುಲ್ ಕಲಾಂ ದೂರು ನೀಡಿದ್ದು ‘ಯತ್ನಾಳ ಹೇಳಿಕೆಯಿಂದಾಗಿ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೆ ಅವರನ್ನು ಅವಮಾನ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಹಿಂದೂ ಹಾಗೂ ಮುಸ್ಲಿಮರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೇಲೆ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ.</p><p>ಮುಸ್ಲಿಂ ಯುವಕನಿಂದ ಆಗಸ್ಟ್ 3ರಂದು ಇಲ್ಲಿನ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎನ್ನುವ ಯುವಕನ ಕೊಲೆಯಾಗಿತ್ತು. ಅವರ ಕುಟುಂಬದವರಿಗೆ ಸಾಂತ್ವಾನ ಹೇಳಲು ಆ. 10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ ‘ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ಕೊಡುತ್ತೇನೆ. ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ’ ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಟೀಕೆಗೂ ಕಾರಣವಾಗಿತ್ತು.</p><p>ಆದ್ದರಿಂದ ಇಲ್ಲಿನ ಕುವೆಂಪು ನಗರದ ನಿವಾಸಿಯಾಗಿರುವ ಅಬ್ದುಲ್ ಕಲಾಂ ದೂರು ನೀಡಿದ್ದು ‘ಯತ್ನಾಳ ಹೇಳಿಕೆಯಿಂದಾಗಿ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೆ ಅವರನ್ನು ಅವಮಾನ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>