<p><strong>ಗಂಗಾವತಿ</strong>: ‘ಸರ್ವರೂ ಸಮಾನರು ಎನ್ನುವ ಕಲ್ಪನೆಯಿಂದ ಅನುಭವ ಮಂಟಪ ನಿರ್ಮಿಸಿದ್ದ ಬಸವಣ್ಣನವರು ವಿಶ್ವದ ಪ್ರಜಾಪ್ರಭುತ್ವದ ಸಂಸ್ಥಾಪಕರು’ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.</p>.<p>ಬಸವ ಜಯಂತಿ ಪ್ರಯುಕ್ತ ಶುಕ್ರವಾರ ನಗರದ ಆನೆಗೊಂದಿ ರಸ್ತೆಯಲ್ಲಿರುವ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ವಿಶ್ವಗುರು ಬಸವಣ್ಣನವರ ತತ್ವಗಳು 21ನೇ ಶತಮಾನದಲ್ಲೂ ವಿಶ್ವಕ್ಕೆ ಮಾದರಿಯಾಗಿವೆ. ಕೇವಲ ವಚನಗಳಿಂದ ಅಷ್ಟೇ ಅಲ್ಲದೆ ಜೀವ ಸಂಕುಲದ ಒಳಿತಿಗಾಗಿ ಅವರು ನೀಡಿದ ಆದರ್ಶ, ತತ್ವಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಮುಂದಿನ ಪೀಳಿಗೆಗೆ ಅವುಗಳನ್ನು ದಾಟಿಸುವ ಕೆಲಸ ಮಾಡಬೇಕು ಎಂದರು.</p>.<p>ಪ್ರಮುಖರಾದ ನಿಜಲಿಂಗಪ್ಪ ಮೆಣಸಿಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ, ದಿಲೀಪ್ ಕುಮಾರ, ನಾಗರಾಜ, ವೀರೇಶ, ಎ.ಕೆ. ಮಹೇಶ, ರಾಜಶೇಖರ ವೈಜಾಪೂರ, ಸಂಗಮೇಶ, ಶ್ರೀನಿವಾಸ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ‘ಸರ್ವರೂ ಸಮಾನರು ಎನ್ನುವ ಕಲ್ಪನೆಯಿಂದ ಅನುಭವ ಮಂಟಪ ನಿರ್ಮಿಸಿದ್ದ ಬಸವಣ್ಣನವರು ವಿಶ್ವದ ಪ್ರಜಾಪ್ರಭುತ್ವದ ಸಂಸ್ಥಾಪಕರು’ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.</p>.<p>ಬಸವ ಜಯಂತಿ ಪ್ರಯುಕ್ತ ಶುಕ್ರವಾರ ನಗರದ ಆನೆಗೊಂದಿ ರಸ್ತೆಯಲ್ಲಿರುವ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ವಿಶ್ವಗುರು ಬಸವಣ್ಣನವರ ತತ್ವಗಳು 21ನೇ ಶತಮಾನದಲ್ಲೂ ವಿಶ್ವಕ್ಕೆ ಮಾದರಿಯಾಗಿವೆ. ಕೇವಲ ವಚನಗಳಿಂದ ಅಷ್ಟೇ ಅಲ್ಲದೆ ಜೀವ ಸಂಕುಲದ ಒಳಿತಿಗಾಗಿ ಅವರು ನೀಡಿದ ಆದರ್ಶ, ತತ್ವಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಮುಂದಿನ ಪೀಳಿಗೆಗೆ ಅವುಗಳನ್ನು ದಾಟಿಸುವ ಕೆಲಸ ಮಾಡಬೇಕು ಎಂದರು.</p>.<p>ಪ್ರಮುಖರಾದ ನಿಜಲಿಂಗಪ್ಪ ಮೆಣಸಿಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ, ದಿಲೀಪ್ ಕುಮಾರ, ನಾಗರಾಜ, ವೀರೇಶ, ಎ.ಕೆ. ಮಹೇಶ, ರಾಜಶೇಖರ ವೈಜಾಪೂರ, ಸಂಗಮೇಶ, ಶ್ರೀನಿವಾಸ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>