ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಸವಣ್ಣ ಪ್ರಜಾಪ್ರಭುತ್ವದ ಸ್ಥಾಪಕ’

Last Updated 14 ಮೇ 2021, 13:25 IST
ಅಕ್ಷರ ಗಾತ್ರ

ಗಂಗಾವತಿ: ‘ಸರ್ವರೂ ಸಮಾನರು ಎನ್ನುವ ಕಲ್ಪನೆಯಿಂದ ಅನುಭವ ಮಂಟಪ ನಿರ್ಮಿಸಿದ್ದ ಬಸವಣ್ಣನವರು ವಿಶ್ವದ ಪ್ರಜಾಪ್ರಭುತ್ವದ ಸಂಸ್ಥಾಪಕರು’ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.

ಬಸವ ಜಯಂತಿ ಪ್ರಯುಕ್ತ ಶುಕ್ರವಾರ ನಗರದ ಆನೆಗೊಂದಿ ರಸ್ತೆಯಲ್ಲಿರುವ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ವಿಶ್ವಗುರು ಬಸವಣ್ಣನವರ ತತ್ವಗಳು 21ನೇ ಶತಮಾನದಲ್ಲೂ ವಿಶ್ವಕ್ಕೆ ಮಾದರಿಯಾಗಿವೆ. ಕೇವಲ ವಚನಗಳಿಂದ ಅಷ್ಟೇ ಅಲ್ಲದೆ ಜೀವ ಸಂಕುಲದ ಒಳಿತಿಗಾಗಿ ಅವರು ನೀಡಿದ ಆದರ್ಶ, ತತ್ವಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಮುಂದಿನ ಪೀಳಿಗೆಗೆ ಅವುಗಳನ್ನು ದಾಟಿಸುವ ಕೆಲಸ ಮಾಡಬೇಕು ಎಂದರು.

ಪ್ರಮುಖರಾದ ನಿಜಲಿಂಗಪ್ಪ ಮೆಣಸಿಗಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ, ದಿಲೀಪ್ ಕುಮಾರ, ನಾಗರಾಜ, ವೀರೇಶ, ಎ.ಕೆ. ಮಹೇಶ, ರಾಜಶೇಖರ ವೈಜಾಪೂರ, ಸಂಗಮೇಶ, ಶ್ರೀನಿವಾಸ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT