<p><strong>ಕುಷ್ಟಗಿ</strong>: ‘ಮಠಗಳಿಗೆ ದೇಣಿಗೆ ಕೊಡದಿದ್ದರೂ ಪರವಾಗಿಲ್ಲ. ಸಮಾಜದಲ್ಲಿರುವ ಬಡ ಮಕ್ಕಳ ವಿದ್ಯಭ್ಯಾಸಕ್ಕೆ, ವಿದ್ಯಾರ್ಥಿಗಳ ಹಾಸ್ಟೆಲ್ ನಡೆಸಲು ಸ್ವಂತ ದುಡಿಮೆಯಿಂದ ಬಂದ ಸಂಪತ್ತಿನಲ್ಲಿ ಸ್ವಲ್ಪ ಭಾಗ ನೀಡಿ ಸಮಾಜದ ಋಣಭಾರ ಇಳಿಸಿಕೊಳ್ಳಿ’ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಪಂಚಮಸಾಲಿ ಸಮಾಜ ಸಂಘಟನೆ ತಾಲ್ಲೂಕು ಘಟಕದ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸಾಧಕರು, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.</p>.<p>‘ಶೈಕ್ಷಣಿಕ ಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿಯೇ ನಡೆಯುತ್ತಿದೆ. 2ಎ ಮೀಸಲಾತಿ ನೀಡಲು ಸರ್ಕಾರ ಕಣ್ತೆರೆದರೆ ಪ್ರಜ್ಞಾವಂತ ಸಮಾಜ ಎನಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸುವ ಶೈಕ್ಷಣಿಕ ಪ್ರಜ್ಞೆ ಬರಬೇಕಿದೆ’ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ‘ಶೈಕ್ಷಣಿಕವಾಗಿ ಬೆಳೆದರೂ ಮಾನವೀಯ ಮೌಲ್ಯಗಳಿಂದ ದೂರ ಸರಿಯುತ್ತಿದ್ದೇವೆ. ಸಮಾಜ ಎಡವುತ್ತಿರುವುದು ಎಲ್ಲಿ ಎಂಬ ಚಿಂತನೆ ಮಾಡಬೇಕು’ ಎಂದ ಅವರು, ‘ಪಂಚಮಸಾಲಿ ಸಮಾಜದ ಹಾಸ್ಟೆಲ್ಗೆ ಸರ್ಕಾರದ ಅನುದಾನದಲ್ಲಿ ₹10 ಲಕ್ಷ ನೆರವು ನೀಡಲಾಗುವುದು’ ಎಂದು ಹೇಳಿದರು.</p>.<p>ಮಾಜಿ ಶಾಸಕ ಕೆ.ಶರಣಪ್ಪ ಮಾತನಾಡಿ, ‘ಪಂಚಮಸಾಲಿ ಸಮಾಜದಲ್ಲಿ ಶೈಕ್ಷಣಿಕ ಜಾಗೃತಿ ಹೆಚ್ಚಬೇಕು’ ಎಂದರು. </p>.<p>ಸಾನ್ನಿಧ್ಯ ವಹಿಸಿದ್ದ ಮಲ್ಲಿಕಾರ್ಜುನ ದೇವರು, ಅಧ್ಯಕ್ಷತೆ ವಹಿಸಿದ್ದ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ, ಕೆ.ಮಹೇಶ, ಬಸವರಾಜ ಹಳ್ಳೂರು, ಡಾ.ಮಹಾಂತೇಶ ಬುಕನಟ್ಟಿ ಸೇರಿದಂತೆ ಇತರರು ಮಾತನಾಡಿದರು.</p>.<p>ನಿವೃತ್ತ ಎಂಜಿನಿಯರ್ ದೇವೇಂದ್ರಗೌಡ ಮೇಟಿ, ಚಾರ್ಟರ್ಡ್ ಅಕೌಂಟರ್ ಸಂಗಮೇಶ ಚಿಟ್ಟಿ, ಶಿವಪ್ಪ ಗೆಜ್ಜಲಗಟ್ಟಿ, ನಾಗರಾಜ ಎಲಿಗಾರ, ಗಿರಿಜಾ ಪೊಲೀಸ್ ಪಾಟೀಲ, ಮಹಾಂತೇಶ ಅಗಸಿಮುಂದಿನ, ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಇತರರು ಇದ್ದರು.</p>.<p>ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಮಾಜದ ನಿವೃತ್ತ ನೌಕರರು ಹಾಗೂ ವಿಶೇಷ ಸಾಧಕರನ್ನು ಗೌರವಿಸಲಾಯಿತು.</p>.<p>ಹನುಮಂತಪ್ಪ ತೋಟದ ನಿರೂಪಿಸಿದರು. ಸಿದ್ದಪ್ಪ ಕೌದಿ ಸ್ವಾಗತಿಸಿದರು. ಪಂಚಮಸಾಲಿ ಸಮಾಜದ ಹಿರಿಯರು, ಯುವಕರು ಮತ್ತು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><blockquote>ನೌಕರಿ ಇರುವ ವರನಿಗಾಗಿ ಕಾಯುವ ಬದಲು ಕಾಯಕಪ್ರಜ್ಞೆ ಉತ್ತಮ ಗುಣ ಸಂಸ್ಕಾರಯುತ ವ್ಯಕ್ತಿ ರೈತನಾದರೂ ಸರಿ ಆತನಿಗೆ ಕನ್ಯೆ ಕೊಡಲು ಹಿಂಜರಿಯಬಾರದು.</blockquote><span class="attribution">– ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ‘ಮಠಗಳಿಗೆ ದೇಣಿಗೆ ಕೊಡದಿದ್ದರೂ ಪರವಾಗಿಲ್ಲ. ಸಮಾಜದಲ್ಲಿರುವ ಬಡ ಮಕ್ಕಳ ವಿದ್ಯಭ್ಯಾಸಕ್ಕೆ, ವಿದ್ಯಾರ್ಥಿಗಳ ಹಾಸ್ಟೆಲ್ ನಡೆಸಲು ಸ್ವಂತ ದುಡಿಮೆಯಿಂದ ಬಂದ ಸಂಪತ್ತಿನಲ್ಲಿ ಸ್ವಲ್ಪ ಭಾಗ ನೀಡಿ ಸಮಾಜದ ಋಣಭಾರ ಇಳಿಸಿಕೊಳ್ಳಿ’ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಪಂಚಮಸಾಲಿ ಸಮಾಜ ಸಂಘಟನೆ ತಾಲ್ಲೂಕು ಘಟಕದ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸಾಧಕರು, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.</p>.<p>‘ಶೈಕ್ಷಣಿಕ ಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿಯೇ ನಡೆಯುತ್ತಿದೆ. 2ಎ ಮೀಸಲಾತಿ ನೀಡಲು ಸರ್ಕಾರ ಕಣ್ತೆರೆದರೆ ಪ್ರಜ್ಞಾವಂತ ಸಮಾಜ ಎನಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಉತ್ತಮ ವಿದ್ಯೆ ಕೊಡಿಸುವ ಶೈಕ್ಷಣಿಕ ಪ್ರಜ್ಞೆ ಬರಬೇಕಿದೆ’ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ‘ಶೈಕ್ಷಣಿಕವಾಗಿ ಬೆಳೆದರೂ ಮಾನವೀಯ ಮೌಲ್ಯಗಳಿಂದ ದೂರ ಸರಿಯುತ್ತಿದ್ದೇವೆ. ಸಮಾಜ ಎಡವುತ್ತಿರುವುದು ಎಲ್ಲಿ ಎಂಬ ಚಿಂತನೆ ಮಾಡಬೇಕು’ ಎಂದ ಅವರು, ‘ಪಂಚಮಸಾಲಿ ಸಮಾಜದ ಹಾಸ್ಟೆಲ್ಗೆ ಸರ್ಕಾರದ ಅನುದಾನದಲ್ಲಿ ₹10 ಲಕ್ಷ ನೆರವು ನೀಡಲಾಗುವುದು’ ಎಂದು ಹೇಳಿದರು.</p>.<p>ಮಾಜಿ ಶಾಸಕ ಕೆ.ಶರಣಪ್ಪ ಮಾತನಾಡಿ, ‘ಪಂಚಮಸಾಲಿ ಸಮಾಜದಲ್ಲಿ ಶೈಕ್ಷಣಿಕ ಜಾಗೃತಿ ಹೆಚ್ಚಬೇಕು’ ಎಂದರು. </p>.<p>ಸಾನ್ನಿಧ್ಯ ವಹಿಸಿದ್ದ ಮಲ್ಲಿಕಾರ್ಜುನ ದೇವರು, ಅಧ್ಯಕ್ಷತೆ ವಹಿಸಿದ್ದ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ, ಕೆ.ಮಹೇಶ, ಬಸವರಾಜ ಹಳ್ಳೂರು, ಡಾ.ಮಹಾಂತೇಶ ಬುಕನಟ್ಟಿ ಸೇರಿದಂತೆ ಇತರರು ಮಾತನಾಡಿದರು.</p>.<p>ನಿವೃತ್ತ ಎಂಜಿನಿಯರ್ ದೇವೇಂದ್ರಗೌಡ ಮೇಟಿ, ಚಾರ್ಟರ್ಡ್ ಅಕೌಂಟರ್ ಸಂಗಮೇಶ ಚಿಟ್ಟಿ, ಶಿವಪ್ಪ ಗೆಜ್ಜಲಗಟ್ಟಿ, ನಾಗರಾಜ ಎಲಿಗಾರ, ಗಿರಿಜಾ ಪೊಲೀಸ್ ಪಾಟೀಲ, ಮಹಾಂತೇಶ ಅಗಸಿಮುಂದಿನ, ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಇತರರು ಇದ್ದರು.</p>.<p>ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಮಾಜದ ನಿವೃತ್ತ ನೌಕರರು ಹಾಗೂ ವಿಶೇಷ ಸಾಧಕರನ್ನು ಗೌರವಿಸಲಾಯಿತು.</p>.<p>ಹನುಮಂತಪ್ಪ ತೋಟದ ನಿರೂಪಿಸಿದರು. ಸಿದ್ದಪ್ಪ ಕೌದಿ ಸ್ವಾಗತಿಸಿದರು. ಪಂಚಮಸಾಲಿ ಸಮಾಜದ ಹಿರಿಯರು, ಯುವಕರು ಮತ್ತು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><blockquote>ನೌಕರಿ ಇರುವ ವರನಿಗಾಗಿ ಕಾಯುವ ಬದಲು ಕಾಯಕಪ್ರಜ್ಞೆ ಉತ್ತಮ ಗುಣ ಸಂಸ್ಕಾರಯುತ ವ್ಯಕ್ತಿ ರೈತನಾದರೂ ಸರಿ ಆತನಿಗೆ ಕನ್ಯೆ ಕೊಡಲು ಹಿಂಜರಿಯಬಾರದು.</blockquote><span class="attribution">– ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>