ಯಾವುದೇ ಆಧಾರ, ಮಾಹಿತಿ ಇಲ್ಲದಿದ್ದರೂ ಕೆಲಸವೇ ಇಲ್ಲದ ಕಾಂಗ್ರೆಸ್ನವರು ಬಿಟ್ ಕಾಯಿನ್ ಹಗರಣವನ್ನು ಪ್ರಸ್ತಾಪಿಸುವ ಮೂಲಕ ಅನಾವಶ್ಯಕವಾಗಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ತಪ್ಪುಗಳಾದಾಗ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಕ್ಕೆ ಅವಕಾಶವಿದೆ. ಆದರೆ ಅಧಿಕಾರವಿಲ್ಲದೆ ತಳಮಳಿಸುತ್ತಿರುವ ಕಾಂಗ್ರೆಸ್ ಪಕ್ಷದವರು ಇಂಥ ಇಲ್ಲಸಲ್ಲದ ವಿಚಾರಗಳನ್ನು ಹರಡುವ ತಮ್ಮ ಹಳೆ ಚಾಳಿಯನ್ನು ಮುಂದುವರೆಸಿದ್ದಾರೆ ಎಂದು ಆರೋಪಿಸಿದರು.