<p><strong>ಹನುಮಸಾಗರ</strong>: ಸಮೀಪದ ಮಲಕಾಪೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ರೊಡ್ಡ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಕೊಡಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ಧಾರೆ.</p>.<p>ಸೋಮವಾರ ಕೊಪ್ಪಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.</p>.<p>ಸಮುದಾಯದ ಜತೆಗೆ ಹೊಂದಾಣಿಕೆ, ಮಕ್ಕಳ ಮೇಲಿನ ವೈಯಕ್ತಿಕ ಕಾಳಜಿ, ಕ್ರಿಯಾಶೀಲತೆ, ಸಮಯಪ್ರಜ್ಞೆ ಹಾಗೂ ಸೃಜನಶೀಲತೆಯ ಕಾರಣ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಸಾಹಿತಿಯೂ ಆಗಿರುವ ಇವರು ಪರಿಕಲ್ಪನೆಗೆ ತಕ್ಕಂತೆ ಕತೆ, ಹಾಡುಗಳನ್ನು ಸೃಷ್ಟಿಸಿ ಬೋಧನೆ ಮಾಡುವಲ್ಲಿ ಆಸಕ್ತಿ ತೋರುತ್ತಾರೆ.</p>.<p>‘ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಮಕ್ಕಳಿಗೆ ಅವರೇ ತರಬೇತಿ ನೀಡುತ್ತಾರೆ. ಕಾರಣ ಪ್ರತಿವರ್ಷ ಬಡವಿದ್ಯಾರ್ಥಿಗಳು ಆಯ್ಕೆಯಾಗುತ್ತಿದ್ದಾರೆ’ ಎಂದು ಮುಖ್ಯಶಿಕ್ಷಕ ಮಲ್ಲಪ್ಪ ಗೊಂದಿ ಹೇಳುತ್ತಾರೆ.</p>.<p>ಸಾರ್ವಜನಿಕರ ನೆರವು ಪಡೆದುಕೊಂಡು ಶಾಲೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹೊಂದಿಸಿದ್ದಾರೆ. ರಂಗ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಅವರು ತಾವೇ ಬರೆದ ನಾಟಕಗಳನ್ನು ಮಕ್ಕಳ ಮೂಲಕ ಪ್ರದರ್ಶನ ಮಾಡಿಸುತ್ತಾರೆ.</p>.<p>ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಗ್ರಾಮದ ಓಣಿ ಓಣಿಗಳಿಗೆ ತೆರಳಿ ಯುವಕರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡು ಜನರಿಗೆ ಅರಿವು ಮೂಡಿಸಿದ್ದನ್ನು ಜನ ನೆನಪಿಸಿಕೊಳ್ಳುತ್ತಾರೆ.</p>.<p>ಅಕ್ಷರ ಫೌಂಡೇಶನ್ ಬೆಂಗಳೂರು ಇವರು ನಡೆಸಿದ ಗಣಿತ ಕಲಿಕಾ ಆಂದೋಲನ ಭಾಗವಹಿಸಿದ್ದ ಬಸವರಾಜ ಗಣಿತದ ಅತ್ಯುತ್ತಮ ಚಟುವಟಿಕೆಗಳನ್ನು ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗ್ರಾಮಸ್ಥರ ನೆರವಿನಲ್ಲಿ ತಮ್ಮ ಶಾಲೆಯನ್ನು ವಿಮಾ ಶಾಲೆಯನ್ನಾಗಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ</strong>: ಸಮೀಪದ ಮಲಕಾಪೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ರೊಡ್ಡ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಕೊಡಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ಧಾರೆ.</p>.<p>ಸೋಮವಾರ ಕೊಪ್ಪಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.</p>.<p>ಸಮುದಾಯದ ಜತೆಗೆ ಹೊಂದಾಣಿಕೆ, ಮಕ್ಕಳ ಮೇಲಿನ ವೈಯಕ್ತಿಕ ಕಾಳಜಿ, ಕ್ರಿಯಾಶೀಲತೆ, ಸಮಯಪ್ರಜ್ಞೆ ಹಾಗೂ ಸೃಜನಶೀಲತೆಯ ಕಾರಣ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಸಾಹಿತಿಯೂ ಆಗಿರುವ ಇವರು ಪರಿಕಲ್ಪನೆಗೆ ತಕ್ಕಂತೆ ಕತೆ, ಹಾಡುಗಳನ್ನು ಸೃಷ್ಟಿಸಿ ಬೋಧನೆ ಮಾಡುವಲ್ಲಿ ಆಸಕ್ತಿ ತೋರುತ್ತಾರೆ.</p>.<p>‘ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಮಕ್ಕಳಿಗೆ ಅವರೇ ತರಬೇತಿ ನೀಡುತ್ತಾರೆ. ಕಾರಣ ಪ್ರತಿವರ್ಷ ಬಡವಿದ್ಯಾರ್ಥಿಗಳು ಆಯ್ಕೆಯಾಗುತ್ತಿದ್ದಾರೆ’ ಎಂದು ಮುಖ್ಯಶಿಕ್ಷಕ ಮಲ್ಲಪ್ಪ ಗೊಂದಿ ಹೇಳುತ್ತಾರೆ.</p>.<p>ಸಾರ್ವಜನಿಕರ ನೆರವು ಪಡೆದುಕೊಂಡು ಶಾಲೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹೊಂದಿಸಿದ್ದಾರೆ. ರಂಗ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಅವರು ತಾವೇ ಬರೆದ ನಾಟಕಗಳನ್ನು ಮಕ್ಕಳ ಮೂಲಕ ಪ್ರದರ್ಶನ ಮಾಡಿಸುತ್ತಾರೆ.</p>.<p>ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಗ್ರಾಮದ ಓಣಿ ಓಣಿಗಳಿಗೆ ತೆರಳಿ ಯುವಕರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡು ಜನರಿಗೆ ಅರಿವು ಮೂಡಿಸಿದ್ದನ್ನು ಜನ ನೆನಪಿಸಿಕೊಳ್ಳುತ್ತಾರೆ.</p>.<p>ಅಕ್ಷರ ಫೌಂಡೇಶನ್ ಬೆಂಗಳೂರು ಇವರು ನಡೆಸಿದ ಗಣಿತ ಕಲಿಕಾ ಆಂದೋಲನ ಭಾಗವಹಿಸಿದ್ದ ಬಸವರಾಜ ಗಣಿತದ ಅತ್ಯುತ್ತಮ ಚಟುವಟಿಕೆಗಳನ್ನು ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗ್ರಾಮಸ್ಥರ ನೆರವಿನಲ್ಲಿ ತಮ್ಮ ಶಾಲೆಯನ್ನು ವಿಮಾ ಶಾಲೆಯನ್ನಾಗಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>