ನಗರಸಭೆ ಪೌರಾಯುಕ್ತ ಎಚ್.ಎನ್. ಭಜಕ್ಕನವರ, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗುಲಾ ಸೇರಿದಂತೆ ಹಲವು ಅಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ ’ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಆಗ ಹೋರಾಟಗಾರರು ‘ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಖಾತ್ರಿ ನೀಡಬೇಕು. ಆದಷ್ಟು ಬೇಗಗೆ ಆಶ್ರಯ ಸಮಿತಿ ಸಭೆ ಕರೆಯಬೇಕು’ ಎಂದು ಆಗ್ರಹಿಸಿದರು. ಧರಣಿ ಗುರುವಾರವೂ ಮುಂದುವರಿಯಲಿದೆ.