ಕೊಪ್ಪಳ: ತಾಲ್ಲೂಕಿನ ಇರಕಲ್ಲಗಡ ಹೋಬಳಿ ವ್ಯಾಪ್ತಿಯ ಗಂಗನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಶನಿವಾರ ಕರಡಿ ದಾಳಿ ಮಾಡಿದೆ.
ಮಕ್ಕಲ್ಲಪ್ಪ ಎಂಬುವರು ದಾಳಿಗೆ ಒಳಗಾದವರು. ಇರಕಲ್ಲಗಡ ಭಾಗದಲ್ಲಿ ಕರಡಿ ಹಾವಳಿ ವ್ಯಾಪಕವಾಗಿದೆ. ರಕ್ಷಣಾ ಕ್ರಮ ಕೈಗೊಳ್ಳಬೇಕು. ಕರಡಿ ಧಾಮ ನಿರ್ಮಾಣ ಮಾಡಬೇಕು ಎಂದು ಪದೇ ಪದೇ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಪ್ರಯೋಜನವಾಗಿಲ್ಲ. ಇದರಿಂದ ನಾವು ಗಾಯಗೊಳ್ಳುವುದು ತಪ್ಪುತ್ತಿಲ್ಲ ಎಂದು ಮುಕ್ಕಲ್ಲಪ್ಪ ಬೇಸರ ವ್ಯಕ್ತಪಡಿಸಿದರು.
ಮುಕ್ಕಲ್ಲಪ್ಪ ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.