ಕನಕಗಿರಿ: ಅಡವಿಬಾವಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರ ಮೇಲೆ ಕರಡಿ ಭಾನುವಾರ ದಾಳಿ ಮಾಡಿದೆ. ರೈತ ಗಾಯಗೊಂಡಿದ್ದಾರೆ.
ಹಿರೇ ಕುಂಟೆಪ್ಪ ವಂಕಲಕುಂಟಿ ಗಾಯಗೊಂಡವರು.
ಕರಡಿ ಏಕಾಏಕಿ ಮೇಲೆ ಎರಗಿದ ಪರಿಣಾಮ ರೈತರ ಕಿವಿ,ಕುತ್ತಿಗೆ ಹಾಗೂ ಕೈಗಳಿಗೆ ಗಾಯಗಳಾಗಿವೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳಕ್ಕೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.
ಅಡವಿಬಾವಿ ಗ್ರಾಮದ ಪರಿಸರದಲ್ಲಿ ಕರಡಿಗಳ ಹಾವಳಿ ಹೆಚ್ಚಾಗಿರುವ ಕುರಿತು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಬೋನ್ ವ್ಯವಸ್ಥೆ ಮಾಡಿಲ್ಲ ಎಂದು ಗ್ರಾಮಸ್ಥರು ದೂರಿದರು.