<p><strong>ಯಲಬುರ್ಗಾ (ಕೊಪ್ಪಳ ಜಿಲ್ಲೆ): </strong>ಯಲಬುರ್ಗಾ ಪಟ್ಟಣದ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ, ಸಂಗೊಳ್ಳಿ ರಾಯಣ್ಣನ ಮೂರ್ತಿ ಅನಾವರಣ ಹಾಗೂ ಶಿಲಾಮಂಟಪದ ಉದ್ಘಾಟನೆ ನೆರವೇರಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಮಧ್ಯಾಹ್ನ 1.30ಕ್ಕೆ ಇಲ್ಲಿಗೆ ಬರಲಿದ್ದಾರೆ.</p>.<p>ಈ ಧಾರ್ಮಿಕ ಕಾರ್ಯಕ್ರಮ ರಾಜಕೀಯ ಸಮಾರಂಭವಾಗಿ ಮಾರ್ಪಟ್ಟಿದೆ. ಪಟ್ಟಣದಾದ್ಯಂತ ರಾಜಕೀಯ ವ್ಯಕ್ತಿಗಳ ಬ್ಯಾನರ್ಗಳು ರಾರಾಜಿಸುತ್ತಿವೆ. ಮಾಜಿ ಸಚಿವ ಬಸವರಾಜ ರಾಯರಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.</p>.<p>ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ರೇವಣಸಿದ್ದೇಶ್ವರ ಬೀರಲಿಂಗೇಶ್ವರ, ಬಸವೇಶ್ವರ ಹಾಗೂ ಮಾಯಾಮ್ಮದೇವಿ ಮೂರ್ತಿಗಳಿಗೆ ರುದ್ರಾಭಿಷೇಕ ನಡೆಯಿತು.</p>.<p>ಬೀರಲಿಂಗೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವ, ಗಂಗಾಪೂಜೆ ನಂತರ ಪಟ್ಟಣದ ವಿವಿಧ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ<br />ಅದ್ದೂರಿಯಾಗಿ ನಡೆಯಿತು.</p>.<p>ಬಯಲು ರಂಗಮಂದಿರ ಎದುರುಗಡೆ ನಿರ್ಮಾಣಗೊಂಡ ಸಂಗೊಳ್ಳಿ ರಾಯಣ್ಣ ಮಂಟಪದಲ್ಲಿ ಮೂರ್ತಿಯನ್ನು ಸಿದ್ದರಾಮಯ್ಯ ಅನಾವರಣ ಮಾಡುವರು.</p>.<p>ಹಾಲುಮತ ಸಮಾಜದ ವೀರನಗೌಡ ಪೊಲೀಸ್ಪಾಟೀಲ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಳೀಯ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀಧರ ಮುರಡಿ ಹಿರೇಮಠದ ಪೀಠಾಧಿಕಾರಿ ಬಸವಲಿಂಗೇಶ್ವರ ಸ್ವಾಮೀಜಿ, ತಿಂಥಣಿಬ್ರಿಜ್ನ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ (ಕೊಪ್ಪಳ ಜಿಲ್ಲೆ): </strong>ಯಲಬುರ್ಗಾ ಪಟ್ಟಣದ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ, ಸಂಗೊಳ್ಳಿ ರಾಯಣ್ಣನ ಮೂರ್ತಿ ಅನಾವರಣ ಹಾಗೂ ಶಿಲಾಮಂಟಪದ ಉದ್ಘಾಟನೆ ನೆರವೇರಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಮಧ್ಯಾಹ್ನ 1.30ಕ್ಕೆ ಇಲ್ಲಿಗೆ ಬರಲಿದ್ದಾರೆ.</p>.<p>ಈ ಧಾರ್ಮಿಕ ಕಾರ್ಯಕ್ರಮ ರಾಜಕೀಯ ಸಮಾರಂಭವಾಗಿ ಮಾರ್ಪಟ್ಟಿದೆ. ಪಟ್ಟಣದಾದ್ಯಂತ ರಾಜಕೀಯ ವ್ಯಕ್ತಿಗಳ ಬ್ಯಾನರ್ಗಳು ರಾರಾಜಿಸುತ್ತಿವೆ. ಮಾಜಿ ಸಚಿವ ಬಸವರಾಜ ರಾಯರಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.</p>.<p>ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ರೇವಣಸಿದ್ದೇಶ್ವರ ಬೀರಲಿಂಗೇಶ್ವರ, ಬಸವೇಶ್ವರ ಹಾಗೂ ಮಾಯಾಮ್ಮದೇವಿ ಮೂರ್ತಿಗಳಿಗೆ ರುದ್ರಾಭಿಷೇಕ ನಡೆಯಿತು.</p>.<p>ಬೀರಲಿಂಗೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವ, ಗಂಗಾಪೂಜೆ ನಂತರ ಪಟ್ಟಣದ ವಿವಿಧ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ<br />ಅದ್ದೂರಿಯಾಗಿ ನಡೆಯಿತು.</p>.<p>ಬಯಲು ರಂಗಮಂದಿರ ಎದುರುಗಡೆ ನಿರ್ಮಾಣಗೊಂಡ ಸಂಗೊಳ್ಳಿ ರಾಯಣ್ಣ ಮಂಟಪದಲ್ಲಿ ಮೂರ್ತಿಯನ್ನು ಸಿದ್ದರಾಮಯ್ಯ ಅನಾವರಣ ಮಾಡುವರು.</p>.<p>ಹಾಲುಮತ ಸಮಾಜದ ವೀರನಗೌಡ ಪೊಲೀಸ್ಪಾಟೀಲ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಳೀಯ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀಧರ ಮುರಡಿ ಹಿರೇಮಠದ ಪೀಠಾಧಿಕಾರಿ ಬಸವಲಿಂಗೇಶ್ವರ ಸ್ವಾಮೀಜಿ, ತಿಂಥಣಿಬ್ರಿಜ್ನ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>