ಬಳಿಕ ಮಾತನಾಡಿ ‘ರೈತರಿಗಾಗಿ ಕ್ಷೇತ್ರದಲ್ಲಿ ಅನೇಕ ದೊಡ್ಡ ದೊಡ್ಡ ನೀರಾವರಿ ಯೋಜನೆಗಳನ್ನ ಜಾರಿ ಮಾಡಲಾಗಿದೆ. ₹188 ಕೋಟಿ ವೆಚ್ಚದಲ್ಲಿ ಬಹದ್ದೂರ್ ಬಂಡಿ ನವಲಕಲ್ ಏತ ನೀರಾವರಿ ಯೋಜನೆ, ₹89.80 ಕೋಟಿಯಲ್ಲಿ ಅಳವಂಡಿ-ಬೆಟಗೇರಿ ಏತ ನೀರಾವರಿ, ₹22ಕೋಟಿ ಮೊತ್ತದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವ್ಯಾಪ್ತಿಯಡಿ ಕವಲೂರು,ಮುರ್ಲಾಪುರ, ಘಟ್ಟರಡ್ಡಿಹಾಳ, ಬೆಳಗಟ್ಟಿ,ಹಟ್ಟಿ, ಅಳವಂಡಿ, ಮೊರನಾಳ, ಬೇಟಗೇರಿ ಹಾಗೂ ಹಿರೇಸಿಂದೋಗಿ ಗ್ರಾಮಗಳಲ್ಲಿ ಕೆರೆ ತುಂಬಿಸುವ ಯೋಜನೆಗೆ ಟೆಂಡರ್ ಕರೆಯಲಾಗಿದೆ’ ಎಂದು ತಿಳಿಸಿದರು.