<p><strong>ಕನಕಗಿರಿ:</strong> ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ಮಂಗಳವಾರ ನಡೆದ ‘ಭಾರತ ಬಂದ್’ ಇಲ್ಲಿ ಯಶಸ್ವಿಯಾಯಿತು.</p>.<p>ರೈತ ಸಂಘಟನೆ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬಂದ್ ಕುರಿತು ಡಂಗೂರ ಸಾರಿ ಜಾಗೃತಿ ಮೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಂಗಡಿ–ಮುಂಗಟ್ಟು, ಹೋಟೆಲ್, ಖಾನಾವಳಿಗಳನ್ನು ಬಂದ್ ಮಾಡಲಾಗಿತ್ತು.</p>.<p>ಶಾಲಾ ಕಾಲೇಜುಗಳು, ಬ್ಯಾಂಕ್ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಬಸ್ ನಿಲ್ದಾಣದಲ್ಲಿ ಜನಸಂಖ್ಯೆ ವಿರಳವಾಗಿದ್ದರೂ ಬಸ್ ಸಂಚಾರ ಸುಗಮವಾಗಿತ್ತು.</p>.<p>ರೈತ ಸಂಘಟನೆ ಕಾರ್ಯಕರ್ತರು ವಾಲ್ಮೀಕಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸವಾರರು ತಮ್ಮ ತಮ್ಮ ಊರು ತಲುಪಲು ಪರದಾಡಬೇಕಾಯಿತು.</p>.<p>ವಿಧಿ ಇಲ್ಲದೆ ಹಳೆ ತಾವರಗೇರಾ ರಸ್ತೆ ಮೂಲಕ ಬಸ್ ಇತರೆ ವಾಹನಗಳು ಸಂಚರಿಸಿದವು.</p>.<p>ಭಾರತ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದರೂ ಇಲ್ಲಿನ ಯಾವ ಕಾರ್ಯಕರ್ತರು, ಕಾಂಗ್ರೆಸ್ ಜನಪ್ರತಿನಿಧಿಗಳು ಸಹ ಭಾಗವಹಿಸಲಿಲ್ಲ.</p>.<p>ರೈತ ಸಂಘಟನೆ ಅಧ್ಯಕ್ಷ ಗಣೇಶರೆಡ್ಡಿ, ಮಾಜಿ ಅಧ್ಯಕ್ಷ ಉಮಾಕಾಂತ ದೇಸಾಯಿ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸಗರಪ್ಪ ಕಂಪ್ಲಿ, ಪ್ರಮುಖರಾದ ಜಯಪ್ರಕಾಶ ರಡ್ಡಿ ಮಾದಿನಾಳ, ಹುಸೇನಸಾಬ ಶಾರದ, ವಿವಿಧ ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ಮಂಗಳವಾರ ನಡೆದ ‘ಭಾರತ ಬಂದ್’ ಇಲ್ಲಿ ಯಶಸ್ವಿಯಾಯಿತು.</p>.<p>ರೈತ ಸಂಘಟನೆ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬಂದ್ ಕುರಿತು ಡಂಗೂರ ಸಾರಿ ಜಾಗೃತಿ ಮೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಂಗಡಿ–ಮುಂಗಟ್ಟು, ಹೋಟೆಲ್, ಖಾನಾವಳಿಗಳನ್ನು ಬಂದ್ ಮಾಡಲಾಗಿತ್ತು.</p>.<p>ಶಾಲಾ ಕಾಲೇಜುಗಳು, ಬ್ಯಾಂಕ್ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಬಸ್ ನಿಲ್ದಾಣದಲ್ಲಿ ಜನಸಂಖ್ಯೆ ವಿರಳವಾಗಿದ್ದರೂ ಬಸ್ ಸಂಚಾರ ಸುಗಮವಾಗಿತ್ತು.</p>.<p>ರೈತ ಸಂಘಟನೆ ಕಾರ್ಯಕರ್ತರು ವಾಲ್ಮೀಕಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸವಾರರು ತಮ್ಮ ತಮ್ಮ ಊರು ತಲುಪಲು ಪರದಾಡಬೇಕಾಯಿತು.</p>.<p>ವಿಧಿ ಇಲ್ಲದೆ ಹಳೆ ತಾವರಗೇರಾ ರಸ್ತೆ ಮೂಲಕ ಬಸ್ ಇತರೆ ವಾಹನಗಳು ಸಂಚರಿಸಿದವು.</p>.<p>ಭಾರತ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದರೂ ಇಲ್ಲಿನ ಯಾವ ಕಾರ್ಯಕರ್ತರು, ಕಾಂಗ್ರೆಸ್ ಜನಪ್ರತಿನಿಧಿಗಳು ಸಹ ಭಾಗವಹಿಸಲಿಲ್ಲ.</p>.<p>ರೈತ ಸಂಘಟನೆ ಅಧ್ಯಕ್ಷ ಗಣೇಶರೆಡ್ಡಿ, ಮಾಜಿ ಅಧ್ಯಕ್ಷ ಉಮಾಕಾಂತ ದೇಸಾಯಿ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸಗರಪ್ಪ ಕಂಪ್ಲಿ, ಪ್ರಮುಖರಾದ ಜಯಪ್ರಕಾಶ ರಡ್ಡಿ ಮಾದಿನಾಳ, ಹುಸೇನಸಾಬ ಶಾರದ, ವಿವಿಧ ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>