ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

Last Updated 22 ಜೂನ್ 2021, 2:45 IST
ಅಕ್ಷರ ಗಾತ್ರ

ಭಟ್ಟರ ನರಸಾಪುರ (ಗಂಗಾವತಿ): ತಾಲ್ಲೂಕಿನ ಕೇಸರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಟ್ಟರ ನರಸಾಪುರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬಿಸಿಬಿ ಸೇತುವೆ ಕಾಮಗಾರಿಗೆ ಶಾಸಕ ಪರಣ್ಣ ಮುನವಳ್ಳಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು,‘ಸೇತುವೆ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹಳ ದಿನಗಳ ಬೇಡಿಕೆಯಾಗಿತ್ತು. ಹಾಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ ಅಡಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. 14 ಹಳ್ಳಿಯ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು’ ಎಂದರು.

ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಿಗಿ, ಪ್ರಮುಖರಾದ ಸಣ್ಣಕ್ಕಿ‌ನೀಲಪ್ಪ, ಶರಣಯ್ಯಸ್ವಾಮಿ, ಬಸವನಗೌಡ ಮಳಿಗಿ, ಶರಣಪ್ಪ ಚಕ್ಕೋಟಿ, ಕುಮಾರೇಪ್ಪ, ವಿರುಪಣ್ಣ, ಗುತ್ತಿಗೆದಾರರಾದ ವೀರಯ್ಯಸ್ವಾಮಿ ಹಿರೇಮಠ, ಇಮಾಮಸಾಬ, ನಿರೂಪಾದಿ, ವೆಂಕಟೇಶ ಹಾಗೂ ಬಸವರಾಜ ಮಾಲಿಪಾಟೀಲ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT