<p><strong>ಕೊಪ್ಪಳ</strong>: ‘ರಾಜ್ಯದಲ್ಲಿಯೂ ಲವ್ ಜಿಹಾದ್ ವಿರುದ್ಧ ಸರ್ಕಾರಕಾನೂನು ತರುವ ಯೋಚನೆ ಮಾಡಿದೆ. ಆದರೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕಮಹಿಳೆಯರ ರಕ್ಷಣೆಗಿಂತ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದರು.</p>.<p>‘ಲವ್ ಜಿಹಾದ್ನಿಂದ ಹಿಂದೂ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಎಷ್ಟೇ ವಿರೋಧ ಬಂದರೂ ಜಾರಿ ಮಾಡಿಯೇ ಮಾಡುತ್ತೇವೆ’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p class="Subhead"><strong>‘ಸಿದ್ದರಾಮಯ್ಯ ಕ್ಷಮೆಯಾಚಿಸಲಿ’</strong></p>.<p class="Subhead"><strong>ಕೊಪ್ಪ (ಚಿಕ್ಕಮಗಳೂರು): </strong>‘ಸಿದ್ದರಾಮಯ್ಯ ಅವರಿಗೆ ‘ಕ್ರಾಸ್ ಬ್ರೀಡ್’ ಬಗ್ಗೆ ಬಹಳ ಆಸಕ್ತಿ. ಅವರ ಹೇಳಿಕೆ ಮೂರ್ಖತನದ್ದು, ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.</p>.<p>‘ಇಂದಿರಾ ಗಾಂಧಿ ಯಾರಿಗೋ ಮದುವೆಯಾಗಿದ್ದರು, ಸೋನಿಯಾ ಗಾಂಧಿ ಅವರು ಇನ್ನ್ಯಾರಿಗೋ ಮದುವೆಯಾದರು’ ಎಂದು ಕುಹಕವಾಡಿದರು.</p>.<p>‘ಸಿದ್ದರಾಮಯ್ಯ ಅವರೇ, ಮುಸಲ್ಮಾನರನ್ನು ಓಲೈಸಿದ್ದರಿಂದ ಗೋಹತ್ಯೆ ವಿಚಾರದಲ್ಲಿ ಮಂಗಳೂರಿನಲ್ಲಿ ಅನೇಕ ಹಿಂದೂ ಯುವಕರ ಕಗ್ಗೊಲೆಗಳಾದವು. ಮುಸಲ್ಮಾನರ ಓಲೈಕೆ ಮಾಡಿದರೆ ಹಿಂದೂ ಸಮಾಜ ಇನ್ನಷ್ಟು ಜಾಗೃತವಾಗುತ್ತದೆ ಎಂದು ನೆನಪಿಟ್ಟುಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ರಾಜ್ಯದಲ್ಲಿಯೂ ಲವ್ ಜಿಹಾದ್ ವಿರುದ್ಧ ಸರ್ಕಾರಕಾನೂನು ತರುವ ಯೋಚನೆ ಮಾಡಿದೆ. ಆದರೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕಮಹಿಳೆಯರ ರಕ್ಷಣೆಗಿಂತ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದರು.</p>.<p>‘ಲವ್ ಜಿಹಾದ್ನಿಂದ ಹಿಂದೂ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಎಷ್ಟೇ ವಿರೋಧ ಬಂದರೂ ಜಾರಿ ಮಾಡಿಯೇ ಮಾಡುತ್ತೇವೆ’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p class="Subhead"><strong>‘ಸಿದ್ದರಾಮಯ್ಯ ಕ್ಷಮೆಯಾಚಿಸಲಿ’</strong></p>.<p class="Subhead"><strong>ಕೊಪ್ಪ (ಚಿಕ್ಕಮಗಳೂರು): </strong>‘ಸಿದ್ದರಾಮಯ್ಯ ಅವರಿಗೆ ‘ಕ್ರಾಸ್ ಬ್ರೀಡ್’ ಬಗ್ಗೆ ಬಹಳ ಆಸಕ್ತಿ. ಅವರ ಹೇಳಿಕೆ ಮೂರ್ಖತನದ್ದು, ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.</p>.<p>‘ಇಂದಿರಾ ಗಾಂಧಿ ಯಾರಿಗೋ ಮದುವೆಯಾಗಿದ್ದರು, ಸೋನಿಯಾ ಗಾಂಧಿ ಅವರು ಇನ್ನ್ಯಾರಿಗೋ ಮದುವೆಯಾದರು’ ಎಂದು ಕುಹಕವಾಡಿದರು.</p>.<p>‘ಸಿದ್ದರಾಮಯ್ಯ ಅವರೇ, ಮುಸಲ್ಮಾನರನ್ನು ಓಲೈಸಿದ್ದರಿಂದ ಗೋಹತ್ಯೆ ವಿಚಾರದಲ್ಲಿ ಮಂಗಳೂರಿನಲ್ಲಿ ಅನೇಕ ಹಿಂದೂ ಯುವಕರ ಕಗ್ಗೊಲೆಗಳಾದವು. ಮುಸಲ್ಮಾನರ ಓಲೈಕೆ ಮಾಡಿದರೆ ಹಿಂದೂ ಸಮಾಜ ಇನ್ನಷ್ಟು ಜಾಗೃತವಾಗುತ್ತದೆ ಎಂದು ನೆನಪಿಟ್ಟುಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>