ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಜನಾದ್ರಿಗೆ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಭೇಟಿ

Published 30 ಮಾರ್ಚ್ 2024, 14:28 IST
Last Updated 30 ಮಾರ್ಚ್ 2024, 14:28 IST
ಅಕ್ಷರ ಗಾತ್ರ

ಗಂಗಾವತಿ: ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಶನಿವಾರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಸ್ಥಳೀಯ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ಆಂಜನೇಯನ ದರ್ಶನ ಪಡೆದರು.

ಶನಿವಾರ ಅಂಜನಾದ್ರಿ ಬೆಟ್ಟಕ್ಕೆ ಭಕ್ತರ ಭೇಟಿ ಹೆಚ್ಚಿರುವ ಕಾರಣ ಡಾ.ಬಸವರಾಜ ಅವರು ಅಂಜನಾದ್ರಿ ಬೆಟ್ಟದ ಹಿಂಬದಿಯ ವೇದಪಾಠ ಶಾಲೆಯ ಬಳಿಯ ಮೆಟ್ಟಿಲುಗಳ ಮೂಲಕ ಅಂಜನಾದ್ರಿ ಬೆಟ್ಟವೇರಿದರು.

ನಂತರ ಆಂಜನೇಯನಿಗೆ ಅರ್ಚರ ಮೂಲಕ ವಿಶೇಷ ಪೂಜೆ ಸಲ್ಲಿಸಿ, ಲೋಕಸಮರದಲ್ಲಿ ಗೆಲ್ಲಲು ಶಕ್ತಿ ನೀಡುವಂತೆ ಹರಕೆ ಹೊತ್ತರು. ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಶಿವಕುಮಾರ, ಶ್ರೀನಿವಾಸ ದೂಳ, ಮಲ್ಲಿಕಾರ್ಜುನ ಸ್ವಾಮಿ, ವೀರೇಶ ಹನುಮನಹಳ್ಳಿ, ಸಾಯಿಕುಮಾರ, ರಾಜ ಆನೆಗೊಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT