ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿಯವರಿಗೆ ₹5 ಲಕ್ಷ ಅನುದಾನ ನೀಡುವುದಾಗಿ ವಸತಿ ಸಚಿವ ಶ್ರೀನಿವಾಸ ಪೂಜಾರಿ ಘೋಷಣೆ ಮಾಡಿದ್ದು, ಪರಿಶಿಷ್ಟ ಪಂಗಡದವರಿಗೂ ಏಕೆ ನೀಡಿಲ್ಲ. ಈ ಹಿಂದಿನ ಸರ್ಕಾರದಲ್ಲಿ ಯೋಜನೆಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸಮಾನವಾಗಿ ಸಿಗುತ್ತಿದ್ದವು. ಸಚಿವರು ಇಲ್ಲಿ ಒಡೆದು ಆಳುವ ನೀತಿ ಅನುಸರಿಸಿದ್ದಾರೆ. ಪರಿಶಿಷ್ಟ ಪಂಗಡದವರಿಗೂ ₹5 ಲಕ್ಷ ಅನುದಾನ ನೀಡಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.