ಕಾರಟಗಿ ಬಿಜೆಪಿ ಮಂಡಳ ಮಹಿಳಾ ಪ್ರಧಾನ ಕಾರ್ಯದರ್ಶಿ ಸುಹಾಸಿನಿ ‘ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ನೆತ್ತರು ಹರಿಯುತ್ತಿದೆ. ನಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಕಠಿಣ ಕ್ರಮ ಎನ್ನುವುದು ಕೇವಲ ಭರವಸೆಯಾಗಿದೆ. ಹಿಂದೂ ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲದ ಕಾರಣ ಈ ಸ್ಥಾನದಲ್ಲಿ ಮುಂದುವರಿಯುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಇರುವೆ’ ಎಂದಿದ್ದಾರೆ. ಇವರೆಲ್ಲರೂ ಸಾಮಾಜಿಕ ತಾಣದಲ್ಲಿ ತಮ್ಮ ರಾಜೀನಾಮೆ ಮಾಹಿತಿ ನೀಡಿದ್ದಾರೆ.