<p><strong>ಕುಷ್ಟಗಿ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಬಿಜೆಪಿ ಪದೇ ಪದೇ ಷಡ್ಯಂತ್ರ ನಡೆಸುತ್ತಿದೆ’ ಎಂದು ಸಚಿವ ದಿನೇಶ ಗುಂಡೂರಾವ್ ಆರೋಪಿಸಿದರು. </p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ಅದೇ ರೀತಿ ವರ್ತಿಸುತ್ತಿದೆ. ಲಿಂಗಾಯತ ಅಥವಾ ಯಾವುದೇ ಸಮುದಾಯಗಳ ತಾತ್ವಿಕ ಭಿನ್ನಾಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಕ್ಕೂ ಸಂಬಂಧವೇ ಇಲ್ಲ’ ಎಂದರು.</p>.<p>‘ಲಿಂಗಾಯತ ಸಮುದಾಯದಲ್ಲಿ ಧರ್ಮ, ಜಾತಿ ಉಪ ಪಂಗಡಗಳ ವಿಚಾರದಲ್ಲಿ ವ್ಯತ್ಯಾಸ ಆಗಿದ್ದರೂ ಅದೇನೂ ಅಂಥ ಸಮಸ್ಯೆ ಅಲ್ಲ. ಆದರೆ, ಅದೇ ವಿಷಯಕ್ಕೆ ಹೆಚ್ಚು ಪ್ರಚಾರ ಸಿಗುತ್ತಿದೆ’ ಎಂದರು.</p>.<p>‘ಸಮೀಕ್ಷೆಯು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಅವರ ಚಿಂತನೆಯಾಗಿದ್ದು, ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯೂ ಅಲ್ಲ. ಜನರ ಜಾತಿ, ಸಂಖ್ಯೆ ಧರ್ಮ, ಸ್ಥಿತಿಗತಿ ವಿವರಗಳನ್ನು ವೈಜ್ಞಾನಿಕ ತಳಹದಿಯಲ್ಲಿ ಮಾಹಿತಿ ಸಂಗ್ರಹಿಸಿದರೆ ಜನಕಲ್ಯಾಣ ಯೋಜನೆಗಳನ್ನು ರೂಪಿಸಲು ಸಾಧ್ಯ’ ಎಂದರು.</p>.<p>‘ಶಿಕ್ಷಕರಿಗೆ ಹೊರೆ ಆಗಬಾರದು ಎಂದು ರಜೆ ಅವಧಿಯನ್ನು ಸಮೀಕ್ಷೆಗೆ ಬಳಸಲಾಗುತ್ತಿದೆ. ಈ ಕುರಿತು ತರಾತುರಿ ಇಲ್ಲ. ಕೆಲ ಸಮುದಾಯಗಳ ವಿರೋಧವಿದೆ ಎಂಬುದೂ ಸುಳ್ಳು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಬಿಜೆಪಿ ಪದೇ ಪದೇ ಷಡ್ಯಂತ್ರ ನಡೆಸುತ್ತಿದೆ’ ಎಂದು ಸಚಿವ ದಿನೇಶ ಗುಂಡೂರಾವ್ ಆರೋಪಿಸಿದರು. </p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ಅದೇ ರೀತಿ ವರ್ತಿಸುತ್ತಿದೆ. ಲಿಂಗಾಯತ ಅಥವಾ ಯಾವುದೇ ಸಮುದಾಯಗಳ ತಾತ್ವಿಕ ಭಿನ್ನಾಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಕ್ಕೂ ಸಂಬಂಧವೇ ಇಲ್ಲ’ ಎಂದರು.</p>.<p>‘ಲಿಂಗಾಯತ ಸಮುದಾಯದಲ್ಲಿ ಧರ್ಮ, ಜಾತಿ ಉಪ ಪಂಗಡಗಳ ವಿಚಾರದಲ್ಲಿ ವ್ಯತ್ಯಾಸ ಆಗಿದ್ದರೂ ಅದೇನೂ ಅಂಥ ಸಮಸ್ಯೆ ಅಲ್ಲ. ಆದರೆ, ಅದೇ ವಿಷಯಕ್ಕೆ ಹೆಚ್ಚು ಪ್ರಚಾರ ಸಿಗುತ್ತಿದೆ’ ಎಂದರು.</p>.<p>‘ಸಮೀಕ್ಷೆಯು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಅವರ ಚಿಂತನೆಯಾಗಿದ್ದು, ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯೂ ಅಲ್ಲ. ಜನರ ಜಾತಿ, ಸಂಖ್ಯೆ ಧರ್ಮ, ಸ್ಥಿತಿಗತಿ ವಿವರಗಳನ್ನು ವೈಜ್ಞಾನಿಕ ತಳಹದಿಯಲ್ಲಿ ಮಾಹಿತಿ ಸಂಗ್ರಹಿಸಿದರೆ ಜನಕಲ್ಯಾಣ ಯೋಜನೆಗಳನ್ನು ರೂಪಿಸಲು ಸಾಧ್ಯ’ ಎಂದರು.</p>.<p>‘ಶಿಕ್ಷಕರಿಗೆ ಹೊರೆ ಆಗಬಾರದು ಎಂದು ರಜೆ ಅವಧಿಯನ್ನು ಸಮೀಕ್ಷೆಗೆ ಬಳಸಲಾಗುತ್ತಿದೆ. ಈ ಕುರಿತು ತರಾತುರಿ ಇಲ್ಲ. ಕೆಲ ಸಮುದಾಯಗಳ ವಿರೋಧವಿದೆ ಎಂಬುದೂ ಸುಳ್ಳು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>