ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪೂಜಪ್ಪ ಹಡಗಲಿ ಸಭೆ ಉದ್ಘಾಟಿಸಿ ಮಾತನಾಡಿ, ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನಾಗಿ ಜಿಲ್ಲೆಯ 1,307 ಬೂತ್ಗಳಲ್ಲಿ ಹಲವಾರು ವಿಭಿನ್ನ ಸೇವಾ ಕಾರ್ಯಕ್ರಮ ಮತ್ತು ಚಟುವಟಿಕೆಗಳಾದ ಅಂಗವಿಕಲರಿಗೆ ನೆರವು ಮತ್ತು ಉಪಯುಕ್ತ ಸಲಕರಣೆ ವಿತರಣೆ, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ತಪಾಸಣಾ ಶಿಬಿರ, ಸ್ಲಂ, ಅನಾಥಾಶ್ರಮ, ಆಸ್ಪತ್ರೆಗಳಲ್ಲಿ ಮತ್ತುವೃದ್ಧಾಶ್ರಮಗಳಿಗೆ ಹಣ್ಣು ಹಂಪಲು ವಿತರಿಸುವುದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಬೂತ್ನಲ್ಲಿ ಉಚಿತ ಪಡಿತರ ಚೀಲಗಳನ್ನು ವಿತರಿಸಲಾಗುವುದು ಎಂದರು.