ಜಿಲ್ಲೆಯಲ್ಲಿ ಎರಡು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಆರಂಭಿಸಲಾಗಿದೆ. ಮೂಲಸೌಕರ್ಯ, ಸಿಬ್ಬಂದಿ ಕೊರತೆ ಇದೆ. ಅವುಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು. ಒಳ್ಳೆಯ ಉದ್ದೇಶದಿಂದ ಕಾಲೇಜು ಆರಂಭಿಸಲಾಗಿದೆ. ಇಲ್ಲಿ ಅಷ್ಟೇ ಆ ಸಮಸ್ಯೆ ಇಲ್ಲ. ರಾಜ್ಯದ ಎಲ್ಲ ಕಡೆ ಸಮಸ್ಯೆ ಇದೆ. ಕೋವಿಡ್ ಸಂಕಷ್ಟ ಸಮಯದಲ್ಲಿ ಹಣಕಾಸಿನ ಕೊರತೆ ಇದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ₹14 ಕೋಟಿ ಅನುದಾನ ನೀಡಲು ಕುಲಪತಿ ಒಪ್ಪಿದ್ದಾರೆ ಎಂದರು.