<p><strong>ಯಲಬುರ್ಗಾ:</strong> ‘ಮನೆಯಲ್ಲಿನ ಬಳಕೆಯಾಗದೇ ಇರುವ ಉತ್ತಮ ಪುಸ್ತಕಗಳನ್ನು ಹಾಳು ಮಾಡದೆ ಜೋಳಿಗೆಗೆ ಹಾಕಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಪ್ಪ ಪೂಜಾರ ಮನವಿ ಮಾಡಿದರು.</p>.<p>ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಓದುವ ಬೆಳಕು ಕಾರ್ಯಕ್ರಮದ ಅಡಿ ನಡೆದ ಪುಸ್ತಕ ಜೋಳಿಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪುಸ್ತಕಗಳು ವಿದ್ಯಾರ್ಥಿಗಳ ಉಜ್ಜಲ ಭವಿಷ್ಯ ರೂಪಿಸುತ್ತವೆ. ಗ್ರಾಮೀಣ ಭಾಗದ ಅನೇಕ ಕಡೆಗಳಲ್ಲಿ ಪುಸ್ತಕಗಳು ಸಿಗದೇ ಓದುಗರು ನಿರಾಸೆಗೊಳ್ಳುತ್ತಿದ್ದಾರೆ ಎಂದರು.</p>.<p>ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಶಾಲಾ ಮಕ್ಕಳಲ್ಲಿ ಓದುವ ಹವ್ಯಾಸ ಕ್ಷೀಣಿಸುತ್ತಿದೆ. ಈ ಕಾರಣ ಮಕ್ಕಳಲ್ಲಿ ಓದುವ ಹವ್ಯಾಸ ಅಭಿವೃದ್ಧಿಗೊಳಿಸಬೇಕಾಗಿದೆ. ಗ್ರಂಥಾಲಯಗಳಲ್ಲಿ ಶಾಲಾ ಮಕ್ಕಳು ಉಚಿತ ಹೆಸರು ನೋಂದಾಯಿಸಿಕೊಳ್ಳುವ ಮೂಲಕ<br />ಅವರ ಓದುವ ಹವ್ಯಾಸ ಹೆಚ್ಚಿಸಬಹುದು. ಅದಕ್ಕಾಗಿ ಪುಸ್ತಕಗಳನ್ನು ಹಾಳು ಮಾಡದೆ ಮನೆಬಾಗಿಲಿಗೆ ಬಂದ ಜೋಳಿಗೆಗೆ ಪುಸ್ತಕ ಹಾಕಿರಿ<br />ಎಂದು ಹೇಳಿದರು.</p>.<p>ಪ್ರೌಢಶಾಲೆ ಮುಖ್ಯಶಿಕ್ಷಕ ನಾಗಭೂಷಣ ಚಿನಿವಾಲರ ಮಾತನಾಡಿದರು.</p>.<p>ಮಾಟರಂಗಿಯ ಹನುಮಂತಗೌಡ ಪಾಟೀಲ, ಲಿಂಗನಬಂಡಿ ಶಾಲೆಯ ಲಿಂಗಪ್ಪ ಹಡಪದ, ಗ್ರಂಥಾಲಯದ ಮೇಲ್ವಿಚಾರಕ ಪ್ರವೀಣಕುಮಾರ, ಎಲ್ಲಾ ಶಾಲೆಯ ಸಹ ಶಿಕ್ಷಕರು, ಶಿಕ್ಷಕಿಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ ಸಿಬ್ಬಂದಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಮನೆಯಲ್ಲಿನ ಬಳಕೆಯಾಗದೇ ಇರುವ ಉತ್ತಮ ಪುಸ್ತಕಗಳನ್ನು ಹಾಳು ಮಾಡದೆ ಜೋಳಿಗೆಗೆ ಹಾಕಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಪ್ಪ ಪೂಜಾರ ಮನವಿ ಮಾಡಿದರು.</p>.<p>ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಓದುವ ಬೆಳಕು ಕಾರ್ಯಕ್ರಮದ ಅಡಿ ನಡೆದ ಪುಸ್ತಕ ಜೋಳಿಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪುಸ್ತಕಗಳು ವಿದ್ಯಾರ್ಥಿಗಳ ಉಜ್ಜಲ ಭವಿಷ್ಯ ರೂಪಿಸುತ್ತವೆ. ಗ್ರಾಮೀಣ ಭಾಗದ ಅನೇಕ ಕಡೆಗಳಲ್ಲಿ ಪುಸ್ತಕಗಳು ಸಿಗದೇ ಓದುಗರು ನಿರಾಸೆಗೊಳ್ಳುತ್ತಿದ್ದಾರೆ ಎಂದರು.</p>.<p>ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಶಾಲಾ ಮಕ್ಕಳಲ್ಲಿ ಓದುವ ಹವ್ಯಾಸ ಕ್ಷೀಣಿಸುತ್ತಿದೆ. ಈ ಕಾರಣ ಮಕ್ಕಳಲ್ಲಿ ಓದುವ ಹವ್ಯಾಸ ಅಭಿವೃದ್ಧಿಗೊಳಿಸಬೇಕಾಗಿದೆ. ಗ್ರಂಥಾಲಯಗಳಲ್ಲಿ ಶಾಲಾ ಮಕ್ಕಳು ಉಚಿತ ಹೆಸರು ನೋಂದಾಯಿಸಿಕೊಳ್ಳುವ ಮೂಲಕ<br />ಅವರ ಓದುವ ಹವ್ಯಾಸ ಹೆಚ್ಚಿಸಬಹುದು. ಅದಕ್ಕಾಗಿ ಪುಸ್ತಕಗಳನ್ನು ಹಾಳು ಮಾಡದೆ ಮನೆಬಾಗಿಲಿಗೆ ಬಂದ ಜೋಳಿಗೆಗೆ ಪುಸ್ತಕ ಹಾಕಿರಿ<br />ಎಂದು ಹೇಳಿದರು.</p>.<p>ಪ್ರೌಢಶಾಲೆ ಮುಖ್ಯಶಿಕ್ಷಕ ನಾಗಭೂಷಣ ಚಿನಿವಾಲರ ಮಾತನಾಡಿದರು.</p>.<p>ಮಾಟರಂಗಿಯ ಹನುಮಂತಗೌಡ ಪಾಟೀಲ, ಲಿಂಗನಬಂಡಿ ಶಾಲೆಯ ಲಿಂಗಪ್ಪ ಹಡಪದ, ಗ್ರಂಥಾಲಯದ ಮೇಲ್ವಿಚಾರಕ ಪ್ರವೀಣಕುಮಾರ, ಎಲ್ಲಾ ಶಾಲೆಯ ಸಹ ಶಿಕ್ಷಕರು, ಶಿಕ್ಷಕಿಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ ಸಿಬ್ಬಂದಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>