ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊಸೆಯಂದಿರ ಬಾವಿಯಲ್ಲಿ ಈಜಲು ಹೋದ ಬಾಲಕ ನೀರು ಪಾಲು

Last Updated 6 ಅಕ್ಟೋಬರ್ 2021, 4:50 IST
ಅಕ್ಷರ ಗಾತ್ರ

ಸಿದ್ದಾಪುರ (ಕಾರಟಗಿ): ಗ್ರಾಮದ ಪುರಾತನ, ಸೊಸೆಯಂದಿರ ಬಾವಿಯಲ್ಲಿ ಈಜಲು ಹೋದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಬಸವರಾಜ (17) ಮೃತಪಟ್ಟ ಬಾಲಕ. ಬಾಲಕ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎನ್ನಲಾಗಿದೆ. ಆದರೆ, ಈಜಲಾಗದೆ ಬಾವಿಯಲ್ಲಿ ಮುಳುಗಿದ್ದಾನೆ. ಇದರಿಂದ ಗಾಬರಿಗೊಂಡ ಸ್ನೇಹಿತರು ಬಾಲಕನ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಅಗ್ನಿ ಶಾಮಕ ಠಾಣೆ ಸಿಬ್ಬಂದಿ, ಸ್ಥಳೀಯ ಈಜುಗಾರರು ಕಾರ್ಯಾಚರಣೆ ನಡೆಸಿದರು. ಬಾಲಕನ ಕಳೆಬರ ನೀರಿ ನಿಂದ ಹೊರತೆಗೆಯಲು ವಿಫಲರಾದರು.

ಬಳಿಕ ತಾಲ್ಲೂಕಿನ ಮೈಲಾಪುರ ಗ್ರಾಮದ ನಿವಾಸಿ ಚನ್ನಬಸಪ್ಪ ಹಡಪದ ಎಂಬ ನುರಿತ ಈಜುಗಾರ ಬಾಲಕನ ದೇಹವನ್ನು ನೀರಿನಿಂದ ಹೊರತರವಲ್ಲಿ ಯಶಸ್ವಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT