ನಗರದ ಸಜ್ಜಿಹೊಲ ಓಣಿಯ ನಿವಾಸಿ ಮುತ್ತು ಭೀಮಪ್ಪ ಎಂಬುವರ ನಾಲ್ಕು ವರ್ಷದ ಪುತ್ರ ಪುರುಷೋತ್ತಮ ನಾಯಿ ಕಡಿತಕ್ಕೆ ಒಳಗಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಬಡ ಕುಟುಂಬದ ಸ್ಥಿತಿ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಈ ವಿಷಯವೂ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ವ್ಯಕ್ತವಾಯಿತು.