ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿನಾಯಿ ಕಚ್ಚಿ ಬಾಲಕನಿಗೆ ಗಾಯ

Last Updated 25 ನವೆಂಬರ್ 2022, 13:26 IST
ಅಕ್ಷರ ಗಾತ್ರ

ಕೊಪ್ಪಳ: ಬಿಡಾಡಿ ದನ ತಿವಿದು ಮಹಿಳೆ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ನಗರದಲ್ಲಿ ಬಾಲಕನಿಗೆ ಬೀದಿ ನಾಯಿ ಕಚ್ಚಿ ಬಾಲಕ ಗಂಭೀರ ಸ್ವರೂಪದ ಗಾಯಗಳಾದ ಘಟನೆ ನಡೆದಿದೆ.

ನಗರದ ಸಜ್ಜಿಹೊಲ ಓಣಿಯ ನಿವಾಸಿ ಮುತ್ತು ಭೀಮಪ್ಪ ಎಂಬುವರ ನಾಲ್ಕು ವರ್ಷದ ಪುತ್ರ ಪುರುಷೋತ್ತಮ ನಾಯಿ ಕಡಿತಕ್ಕೆ ಒಳಗಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಬಡ ಕುಟುಂಬದ ಸ್ಥಿತಿ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಈ ವಿಷಯವೂ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ವ್ಯಕ್ತವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT