<p><strong>ಕೊಪ್ಪಳ</strong>: ಹೂಗಾರ ಸಮಾಜದ ವತಿಯಿಂದ ಜು. 9ರಂದು ಬೆಳಿಗ್ಗೆ 10.30ಕ್ಕೆ ಮುದ್ದೇಬಿಹಾಳದ ಕೃಷ್ಣಮಂಗಲ ಭವನದಲ್ಲಿ ವಧು-ವರರ ರಾಜ್ಯಮಟ್ಟದ ಸಮಾವೇಶ ಹಾಗೂ ಸುರೇಶ ಬಿ. ಹೂಗಾರ ಅವರು ಬರೆದ ‘ಹೂಗಾರ ಸಮಾಜದ ಸಾಂಸ್ಕೃತಿಕ ಇತಿಹಾಸ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಹೂಗಾರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಾಜದ ಪ್ರಕಟಣೆ ಕೋರಿದೆ.</p>.<p>ವಧು-ವರ ಆಕಾಂಕ್ಷಿಗಳು ಹಾಗೂ ಪಾಲಕರು ಕಡ್ಡಾಯವಾಗಿ ಮೊದಲೇ ಹೆಸರು ನೋಂದಾಯಿಸಬೇಕು. ಬಯೋಡೇಟಾ ಹಾಗೂ ಫೋಟೊಗಳನ್ನು ತರಬೇಕು. ಇನ್ನಷ್ಟು ಮಾಹಿತಿಗೆ 8050492499 ಸಂಪರ್ಕಿಸಿ.</p>.<p><strong>ಮತದಾರರ ಕರಡು ಪಟ್ಟಿ ಪ್ರಕಟ</strong></p><p>ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಕೊಪ್ಪಳ ತಾಲ್ಲೂಕಿನ ಎಂಟು ಜಿಲ್ಲಾ ಪಂಚಾಯಿತಿ ಮತ್ತು 25 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಇಲ್ಲಿನ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಹಾಗೂ ಅಧೀನ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದೆ.</p>.<p>ಕ್ಷೇತ್ರದ ಮತದಾರರು ಪಟ್ಟಿಯನ್ನು ತಮ್ಮ ಸಮೀಪದ ಮತಗಟ್ಟೆ ಅಧಿಕಾರಿಗಳ ಹತ್ತಿರ ಅಥವಾ ತಹಶೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬಹುದು. ಆಕ್ಷೇಪಣೆ ಸಲ್ಲಿಸಲು ಜುಲೈ 4 ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು 7 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ಕೋರಿದೆ.</p>.<p><strong>ಕೆಡಿಪಿ ಸಭೆ ಜು. 1ರಂದು</strong></p><p>ಜಿಲ್ಲಾ ಪಂಚಾಯಿತಿ ವತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2023-24ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜು. 1ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜರುಗಲಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ಜಿ.ಪಂ. ಸಿಇಒ ರಾಹುಲ್ ರತ್ನಂ ಪಾಂಡೆಯ ತಿಳಿಸಿದ್ದಾರೆ.</p>.<p><strong>ಆಯ್ಕೆಗಾಗಿ ಅರ್ಜಿ ಆಹ್ವಾನ</strong></p><p>ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಯೋಜನೆಯಡಿ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಈ ಸಂಸ್ಥೆಯು ಸಾಂಸ್ಥಿಕ ನಿರ್ಮಾಣ, ಸಾಮರ್ಥ್ಯ ಬಲವರ್ಧನೆ, ಸಾಮಾಜಿಕ ಅಭಿವೃದ್ಧಿ, ಹಣಕಾಸು ಸೇರ್ಪಡೆ, ಕೃಷಿ ಜೀವನೋಪಾಯ, ಡಿ.ಡಿ.ಯು.ಜಿ.ಕೆ.ವೈ. ಯೋಜನೆಯಡಿ ಕೌಶಲ ತರಬೇತಿ ಕಾರ್ಯಕ್ರಮ, ಈ ಐದು ಕ್ಷೇತ್ರಗಳಲ್ಲಿ ಅನುಭವವಿರುವ ಮತ್ತು ಕ್ರಿಯಾಶೀಲ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ತಾಂತ್ರಿಕ ಸೇವೆಗಳನ್ನು ಪಡೆದುಕೊಳ್ಳಲಿದೆ.</p>.<p>ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ತೇರ್ಗಡೆಯಾಗಿರಬೇಕು. ಕನಿಷ್ಠ 5 ವರ್ಷ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿರಬೇಕು. ತರಬೇತಿ ಪಡೆದುಕೊಳ್ಳಲು ಅಥವಾ ನೀಡಲು ವಿವಿಧ ಸಂಸ್ಥೆಗಳಿಗೆ ಪ್ರವಾಸ ಮಾಡಲು ಸಿದ್ಧರಿರಬೇಕು. ಇನ್ನಷ್ಟು ಮಾಹಿತಿಗೆ ಖುದ್ದಾಗಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ದೊರೆಯುವ ನಿಗದಿತ ನಮೂನೆ ಪಡೆದುಕೊಂಡು ಜು. 5ರ ಒಳಗೆ ಅರ್ಜಿ ಸಲ್ಲಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಹೂಗಾರ ಸಮಾಜದ ವತಿಯಿಂದ ಜು. 9ರಂದು ಬೆಳಿಗ್ಗೆ 10.30ಕ್ಕೆ ಮುದ್ದೇಬಿಹಾಳದ ಕೃಷ್ಣಮಂಗಲ ಭವನದಲ್ಲಿ ವಧು-ವರರ ರಾಜ್ಯಮಟ್ಟದ ಸಮಾವೇಶ ಹಾಗೂ ಸುರೇಶ ಬಿ. ಹೂಗಾರ ಅವರು ಬರೆದ ‘ಹೂಗಾರ ಸಮಾಜದ ಸಾಂಸ್ಕೃತಿಕ ಇತಿಹಾಸ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಹೂಗಾರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಾಜದ ಪ್ರಕಟಣೆ ಕೋರಿದೆ.</p>.<p>ವಧು-ವರ ಆಕಾಂಕ್ಷಿಗಳು ಹಾಗೂ ಪಾಲಕರು ಕಡ್ಡಾಯವಾಗಿ ಮೊದಲೇ ಹೆಸರು ನೋಂದಾಯಿಸಬೇಕು. ಬಯೋಡೇಟಾ ಹಾಗೂ ಫೋಟೊಗಳನ್ನು ತರಬೇಕು. ಇನ್ನಷ್ಟು ಮಾಹಿತಿಗೆ 8050492499 ಸಂಪರ್ಕಿಸಿ.</p>.<p><strong>ಮತದಾರರ ಕರಡು ಪಟ್ಟಿ ಪ್ರಕಟ</strong></p><p>ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಕೊಪ್ಪಳ ತಾಲ್ಲೂಕಿನ ಎಂಟು ಜಿಲ್ಲಾ ಪಂಚಾಯಿತಿ ಮತ್ತು 25 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಇಲ್ಲಿನ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಹಾಗೂ ಅಧೀನ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದೆ.</p>.<p>ಕ್ಷೇತ್ರದ ಮತದಾರರು ಪಟ್ಟಿಯನ್ನು ತಮ್ಮ ಸಮೀಪದ ಮತಗಟ್ಟೆ ಅಧಿಕಾರಿಗಳ ಹತ್ತಿರ ಅಥವಾ ತಹಶೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬಹುದು. ಆಕ್ಷೇಪಣೆ ಸಲ್ಲಿಸಲು ಜುಲೈ 4 ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು 7 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ಕೋರಿದೆ.</p>.<p><strong>ಕೆಡಿಪಿ ಸಭೆ ಜು. 1ರಂದು</strong></p><p>ಜಿಲ್ಲಾ ಪಂಚಾಯಿತಿ ವತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2023-24ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜು. 1ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜರುಗಲಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ಜಿ.ಪಂ. ಸಿಇಒ ರಾಹುಲ್ ರತ್ನಂ ಪಾಂಡೆಯ ತಿಳಿಸಿದ್ದಾರೆ.</p>.<p><strong>ಆಯ್ಕೆಗಾಗಿ ಅರ್ಜಿ ಆಹ್ವಾನ</strong></p><p>ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಯೋಜನೆಯಡಿ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಈ ಸಂಸ್ಥೆಯು ಸಾಂಸ್ಥಿಕ ನಿರ್ಮಾಣ, ಸಾಮರ್ಥ್ಯ ಬಲವರ್ಧನೆ, ಸಾಮಾಜಿಕ ಅಭಿವೃದ್ಧಿ, ಹಣಕಾಸು ಸೇರ್ಪಡೆ, ಕೃಷಿ ಜೀವನೋಪಾಯ, ಡಿ.ಡಿ.ಯು.ಜಿ.ಕೆ.ವೈ. ಯೋಜನೆಯಡಿ ಕೌಶಲ ತರಬೇತಿ ಕಾರ್ಯಕ್ರಮ, ಈ ಐದು ಕ್ಷೇತ್ರಗಳಲ್ಲಿ ಅನುಭವವಿರುವ ಮತ್ತು ಕ್ರಿಯಾಶೀಲ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ತಾಂತ್ರಿಕ ಸೇವೆಗಳನ್ನು ಪಡೆದುಕೊಳ್ಳಲಿದೆ.</p>.<p>ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ತೇರ್ಗಡೆಯಾಗಿರಬೇಕು. ಕನಿಷ್ಠ 5 ವರ್ಷ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿರಬೇಕು. ತರಬೇತಿ ಪಡೆದುಕೊಳ್ಳಲು ಅಥವಾ ನೀಡಲು ವಿವಿಧ ಸಂಸ್ಥೆಗಳಿಗೆ ಪ್ರವಾಸ ಮಾಡಲು ಸಿದ್ಧರಿರಬೇಕು. ಇನ್ನಷ್ಟು ಮಾಹಿತಿಗೆ ಖುದ್ದಾಗಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ದೊರೆಯುವ ನಿಗದಿತ ನಮೂನೆ ಪಡೆದುಕೊಂಡು ಜು. 5ರ ಒಳಗೆ ಅರ್ಜಿ ಸಲ್ಲಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>