ಸರ್ಕಾರ ಕೆರೆಯ ವಿವಿಧ ಕಾಮಗಾರಿ ಅಭಿವೃದ್ಧಿಗೆ ₹ 1 ಕೋಟಿ ಮಂಜೂರು ಮಾಡಿದ್ದು, ಕಾಮಗಾರಿಯನ್ನು 2023ರಲ್ಲೇ ಪೂರ್ಣಗೊಳಿಬೇಕಿತ್ತು. ಆದರೆ ಕೆರೆಯಲ್ಲಿ ನೀರು ಸಂಗ್ರಹವಾದ ಕಾರಣ ಕಾಮಗಾರಿ ನಡೆದಿಲ್ಲ. ಇತರೆ ಕೆಲಸ ಶೇ 90ರಷ್ಟು ಮುಗಿದಿದ್ದು, ಇನ್ನೂ 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.