<p>ಕುಷ್ಟಗಿ: ಸಮಯಕ್ಕೆ ಸರಿಯಾಗಿ ಸಾರಿಗೆ ಸಂಸ್ಥೆ ಬಸ್ಗಳು ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ದೂರಿದ್ದಾರೆ.</p>.<p>ಈ ಸಮಸ್ಯೆ ಕುರಿತು ಶಾಸಕರ ಗಮನಸೆಳೆಯಲು ಸೋಮವಾರ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿದ್ದ ಅಡವಿಭಾವಿ, ಹುಲ್ಸಗೇರಿ, ಚಳಗೇರಿ ಗ್ರಾಮದ ಅನೇಕ ವಿದ್ಯಾರ್ಥಿಗಳು ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಬರೆದ ಮನವಿಯನ್ನು ಕಚೇರಿ ಸಿಬ್ಬಂದಿಗೆ ಸಲ್ಲಿಸಿ ಸಾರಿಗೆ ವ್ಯವಸ್ಥೆಯ ದೈನಂದಿನ ತೊಂದರೆಯನ್ನು ವಿವರಿಸಿದರು.</p>.<p>ನಿಗದಿತ ಸಮಯದಲ್ಲಿ ಬಸ್ಗಳು ಬಾರದಿರುವುದು, ಬಂದರೂ ನಿಲ್ಲಿಸದೇ ಹೋಗುವುದು ಸಾಮಾನ್ಯ ಸಂಗತಿಯಾಗಿ. ಇದರಿಂದ ನಿತ್ಯ ಶಾಲೆ, ಕಾಲೇಜುಗಳಿಗೆ ಹೋಗಲಾರದೆ ನೂರಾರು ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗುತ್ತಿದ್ದು ಭವಿಷ್ಯದಲ್ಲಿ ಶೈಕ್ಷಣಿಕ ಹಿನ್ನಡೆ ಅನುಭವಿಸುವಂತಾಗುವ ಸಾಧ್ಯತೆ ಇದೆ. ಅಡವಿಭಾವಿಯಿಂದ ವಿದ್ಯಾರ್ಥಿಗಳು ನಿತ್ಯ 4 ಕಿಮೀ ನಡೆದು ಹನುಸಾಗರ ಕುಷ್ಟಗಿ ಮಾರ್ಗದ ಕ್ರಾಸ್ಗೆ ಬರಬೇಕಾಗುತ್ತದೆ. ಬರುವುದರೊಳಗಾಗಿ ಬಸ್ಗಳೇ ಇರುವುದಿಲ್ಲ. ಹಾಗಾಗಿ ಕಾದು ಕುಳಿತು ಮರಳಿ ಮನೆಗೆ ಹೋಗುವ ಅನಿವಾರ್ಯತೆ ಎದುರಾಗಿದೆ ಎಂದರು.</p>.<p>ಈ ಕಾರಣಕ್ಕೆ ಈ ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರತ್ಯೇಕವಾಗಿ ಬೆಳಿಗ್ಗೆ 8.45ಕ್ಕೆ ಮತ್ತು ಮಧ್ಯಾಹ್ನ 2.30ರ ಸಮಯದಲ್ಲಿ ಬಸ್ಗಳನ್ನು ಓಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ನಂತರ ಇಲ್ಲಿಯ ಈಶಾನ್ಯ ಸಾರಿಗೆ ಸಂಸ್ಥೆ ಘಟಕದ ವ್ಯವಸ್ಥಾಪಕರಿಗೂ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.</p>.<p>ನವೀನ್, ಶ್ರೀಕಾಂತ, ಈರಣ್ಣ, ಹನುಮಂತ, ಯಮನೂರಪ್ಪ, ಮಂಜುನಾಥ, ಬಸವರಾಜ, ಸಂತೋಷ<br />ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಷ್ಟಗಿ: ಸಮಯಕ್ಕೆ ಸರಿಯಾಗಿ ಸಾರಿಗೆ ಸಂಸ್ಥೆ ಬಸ್ಗಳು ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ದೂರಿದ್ದಾರೆ.</p>.<p>ಈ ಸಮಸ್ಯೆ ಕುರಿತು ಶಾಸಕರ ಗಮನಸೆಳೆಯಲು ಸೋಮವಾರ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿದ್ದ ಅಡವಿಭಾವಿ, ಹುಲ್ಸಗೇರಿ, ಚಳಗೇರಿ ಗ್ರಾಮದ ಅನೇಕ ವಿದ್ಯಾರ್ಥಿಗಳು ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಬರೆದ ಮನವಿಯನ್ನು ಕಚೇರಿ ಸಿಬ್ಬಂದಿಗೆ ಸಲ್ಲಿಸಿ ಸಾರಿಗೆ ವ್ಯವಸ್ಥೆಯ ದೈನಂದಿನ ತೊಂದರೆಯನ್ನು ವಿವರಿಸಿದರು.</p>.<p>ನಿಗದಿತ ಸಮಯದಲ್ಲಿ ಬಸ್ಗಳು ಬಾರದಿರುವುದು, ಬಂದರೂ ನಿಲ್ಲಿಸದೇ ಹೋಗುವುದು ಸಾಮಾನ್ಯ ಸಂಗತಿಯಾಗಿ. ಇದರಿಂದ ನಿತ್ಯ ಶಾಲೆ, ಕಾಲೇಜುಗಳಿಗೆ ಹೋಗಲಾರದೆ ನೂರಾರು ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗುತ್ತಿದ್ದು ಭವಿಷ್ಯದಲ್ಲಿ ಶೈಕ್ಷಣಿಕ ಹಿನ್ನಡೆ ಅನುಭವಿಸುವಂತಾಗುವ ಸಾಧ್ಯತೆ ಇದೆ. ಅಡವಿಭಾವಿಯಿಂದ ವಿದ್ಯಾರ್ಥಿಗಳು ನಿತ್ಯ 4 ಕಿಮೀ ನಡೆದು ಹನುಸಾಗರ ಕುಷ್ಟಗಿ ಮಾರ್ಗದ ಕ್ರಾಸ್ಗೆ ಬರಬೇಕಾಗುತ್ತದೆ. ಬರುವುದರೊಳಗಾಗಿ ಬಸ್ಗಳೇ ಇರುವುದಿಲ್ಲ. ಹಾಗಾಗಿ ಕಾದು ಕುಳಿತು ಮರಳಿ ಮನೆಗೆ ಹೋಗುವ ಅನಿವಾರ್ಯತೆ ಎದುರಾಗಿದೆ ಎಂದರು.</p>.<p>ಈ ಕಾರಣಕ್ಕೆ ಈ ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರತ್ಯೇಕವಾಗಿ ಬೆಳಿಗ್ಗೆ 8.45ಕ್ಕೆ ಮತ್ತು ಮಧ್ಯಾಹ್ನ 2.30ರ ಸಮಯದಲ್ಲಿ ಬಸ್ಗಳನ್ನು ಓಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ನಂತರ ಇಲ್ಲಿಯ ಈಶಾನ್ಯ ಸಾರಿಗೆ ಸಂಸ್ಥೆ ಘಟಕದ ವ್ಯವಸ್ಥಾಪಕರಿಗೂ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.</p>.<p>ನವೀನ್, ಶ್ರೀಕಾಂತ, ಈರಣ್ಣ, ಹನುಮಂತ, ಯಮನೂರಪ್ಪ, ಮಂಜುನಾಥ, ಬಸವರಾಜ, ಸಂತೋಷ<br />ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>