‘ನಿಲ್ದಾಣದಲ್ಲಿ ಕುಳಿತುಕೊಳ್ಳಲು ಆಗದಷ್ಟು ದೂಳು ಮೆತ್ತಿಕೊಳ್ಳುತ್ತದೆ. ಉಸಿರಾಡಲು ಸಮಸ್ಯೆಯಾಗುತ್ತಿದೆ. ಕುಡಿಯಲು ನೀರು ಸಿಗುತ್ತಿಲ್ಲ. ಎಲ್ಲೆಂದರಲ್ಲಿ ಗುಟ್ಕಾ, ಎಲೆ ಅಡಿಕೆ ತಿಂದು ಉಗಿಯಲಾಗಿದೆ. ನಿಲ್ದಾಣದ ಇಡೀ ವಾತಾವರಣ ನರಕ ಮಯವಾಗಿದೆ. ತಕ್ಷಣ ಶಾಸಕರು, ಅಧಿಕಾರಿಗಳು ಇತ್ತ ಗಮನ ಹರಿಸಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಅವರು
ಆಗ್ರಹಿಸಿದರು.