<p><strong>ಕೊಪ್ಪಳ:</strong> ತಾಲ್ಲೂಕಿನ ಅಳವಂಡಿ ಸಮೀಪದ ಹೈದರನಗರ ಗ್ರಾಮದಲ್ಲಿ ಬುಧವಾರ ಸರ್ಕಾರಿ ಬಸ್ ರಸ್ತೆಯ ಕೆಸರಿನಲ್ಲಿ ಸಿಲುಕಿದ್ದು ಶಾಲಾ ಕಾಲೇಜುಗಳಿಗೆ ತೆರಳಬೇಕಿದ್ದ ವಿದ್ಯಾರ್ಥಿಗಳು ಪರದಾಡಿದರು. </p><p>ಹೈದರನಗರ ಗ್ರಾಮದಲ್ಲಿ ರಸ್ತೆಗಳು ಹದೆಗೆಟ್ಟಿದ್ದು, ಸಂಚಾರ ನಿತ್ಯ ದುಸ್ತರವಾಗಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಸಾಧಾರಣ ಮಳೆಗೆ ರಸ್ತೆಗಳು ದೊಡ್ಡ ಹೊಂಡಗಳಾಗಿ ಪರಿವರ್ತನೆಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.ಖಾಸಗಿ ಬಸ್ ನಿಲ್ದಾಣ ಕೆಎಸ್ಆರ್ಟಿಸಿಗೆ ಹಸ್ತಾಂತರಿಸಲು ಪ್ರಸ್ತಾವನೆ: ಚರ್ಚೆ.<p>ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ಸವಾರರು ಪರದಾಡುವುದು ಸಾಮಾನ್ಯವಾಗಿದೆ. ಮಳೆ ಬಂದರೆ ಈ ರಸ್ತೆ ನೀರು ತುಂಬಿ ಕೆರೆಯಾಗಿ ನಿರ್ಮಾಣವಾಗಿ ನಂತರ ಕೆಸರು ಗದ್ದೆಯಾಗಿ ಮಾರ್ಪಡುತ್ತವೆ. ಈ ವೇಳೆ ವಾಹನ ಸವಾರರು ಜಾರಿ ಬೀಳುವುದು ಕಟ್ಟಿಟ್ಟ ಬುತ್ತಿಯಾಗಿದೆ . </p>.ಲಕ್ಷ್ಮೇಶ್ವರ: ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಮಕ್ಕಳಿಂದ ಪ್ರತಿಭಟನೆ.<p>ಬಸ್ ಸಿಲುಕಿದ ಪರಿಣಾಮ ಮುಂದಕ್ಕೆ ಹೋಗಲಾಗದೆ ವಿದ್ಯಾರ್ಥಿಗಳು ಪರದಾಡಿದರು. </p><p>ಅಳವಂಡಿಯಿಂದ ನಿಲೋಗಿಪುರಕ್ಕೆ ಹೋಗುವಾಗ ಹೈದರನಗರ ಗ್ರಾಮದಲ್ಲಿ ಬಸ್ ಕೆಸರಿನಲ್ಲಿ ಸಿಲುಕಿತು. ಈ ಬಸ್ ನಿಲೋಗಿಪುರಕ್ಕೆ ಹೋಗಿ ಗ್ರಾಮೀಣ ಪ್ರದೇಶದ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತು ಅಳವಂಡಿಗೆ ತೆರಳಬೇಕಿತ್ತು.</p> .ಬೆಳ್ತಂಗಡಿ | ಮಳೆಗಾಲದಲ್ಲಿ ಹೊಸ ಬಸ್ ನಿಲ್ದಾಣದ ಕಾಮಗಾರಿ: ಮಣ್ಣು ಕುಸಿಯುವ ಭೀತಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ತಾಲ್ಲೂಕಿನ ಅಳವಂಡಿ ಸಮೀಪದ ಹೈದರನಗರ ಗ್ರಾಮದಲ್ಲಿ ಬುಧವಾರ ಸರ್ಕಾರಿ ಬಸ್ ರಸ್ತೆಯ ಕೆಸರಿನಲ್ಲಿ ಸಿಲುಕಿದ್ದು ಶಾಲಾ ಕಾಲೇಜುಗಳಿಗೆ ತೆರಳಬೇಕಿದ್ದ ವಿದ್ಯಾರ್ಥಿಗಳು ಪರದಾಡಿದರು. </p><p>ಹೈದರನಗರ ಗ್ರಾಮದಲ್ಲಿ ರಸ್ತೆಗಳು ಹದೆಗೆಟ್ಟಿದ್ದು, ಸಂಚಾರ ನಿತ್ಯ ದುಸ್ತರವಾಗಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಸಾಧಾರಣ ಮಳೆಗೆ ರಸ್ತೆಗಳು ದೊಡ್ಡ ಹೊಂಡಗಳಾಗಿ ಪರಿವರ್ತನೆಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.ಖಾಸಗಿ ಬಸ್ ನಿಲ್ದಾಣ ಕೆಎಸ್ಆರ್ಟಿಸಿಗೆ ಹಸ್ತಾಂತರಿಸಲು ಪ್ರಸ್ತಾವನೆ: ಚರ್ಚೆ.<p>ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ಸವಾರರು ಪರದಾಡುವುದು ಸಾಮಾನ್ಯವಾಗಿದೆ. ಮಳೆ ಬಂದರೆ ಈ ರಸ್ತೆ ನೀರು ತುಂಬಿ ಕೆರೆಯಾಗಿ ನಿರ್ಮಾಣವಾಗಿ ನಂತರ ಕೆಸರು ಗದ್ದೆಯಾಗಿ ಮಾರ್ಪಡುತ್ತವೆ. ಈ ವೇಳೆ ವಾಹನ ಸವಾರರು ಜಾರಿ ಬೀಳುವುದು ಕಟ್ಟಿಟ್ಟ ಬುತ್ತಿಯಾಗಿದೆ . </p>.ಲಕ್ಷ್ಮೇಶ್ವರ: ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಮಕ್ಕಳಿಂದ ಪ್ರತಿಭಟನೆ.<p>ಬಸ್ ಸಿಲುಕಿದ ಪರಿಣಾಮ ಮುಂದಕ್ಕೆ ಹೋಗಲಾಗದೆ ವಿದ್ಯಾರ್ಥಿಗಳು ಪರದಾಡಿದರು. </p><p>ಅಳವಂಡಿಯಿಂದ ನಿಲೋಗಿಪುರಕ್ಕೆ ಹೋಗುವಾಗ ಹೈದರನಗರ ಗ್ರಾಮದಲ್ಲಿ ಬಸ್ ಕೆಸರಿನಲ್ಲಿ ಸಿಲುಕಿತು. ಈ ಬಸ್ ನಿಲೋಗಿಪುರಕ್ಕೆ ಹೋಗಿ ಗ್ರಾಮೀಣ ಪ್ರದೇಶದ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತು ಅಳವಂಡಿಗೆ ತೆರಳಬೇಕಿತ್ತು.</p> .ಬೆಳ್ತಂಗಡಿ | ಮಳೆಗಾಲದಲ್ಲಿ ಹೊಸ ಬಸ್ ನಿಲ್ದಾಣದ ಕಾಮಗಾರಿ: ಮಣ್ಣು ಕುಸಿಯುವ ಭೀತಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>