ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಸೆರೆಗೆ ಬೋನು ಅಳವಡಿಕೆ

Last Updated 8 ಜುಲೈ 2021, 4:12 IST
ಅಕ್ಷರ ಗಾತ್ರ

ಹನುಮಸಾಗರ: ನಾಲ್ಕಾರು ದಿನಗಳಿಂದ ಗಡಚಿಂತ ಭಾಗದ ರೈತರ ಹಾಗೂ ಕುರಿಗಾಹಿಗಳ ಆತಂಕಕ್ಕೆ ಕಾರಣವಾಗಿರುವ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ನೆರವಿನಿಂದ ಬೆಟ್ಟದ ಬಳಿ ಬೋನು ಅಳವಡಿಸಿದರು.

ವಲಯ ಅರಣ್ಯ ಅಧಿಕಾರಿ ಸನ್ವರ ಮಾತನಾಡಿ,‘ತಾಂತ್ರಿಕವಾಗಿ ಚಿರತೆ ಸೆರೆ ಹಿಡಿಯಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದೇವೆ. ಚಿರತೆ ಸಿಗುವವರೆಗೂ ಯಾವುದೇ ಕಾರಣಕ್ಕೂ ಬೆಟ್ಟದ ಕಡೆಗೆ ರೈತರು ಹಾಗೂ ಕುರಿಗಾಹಿಗಳು ಬರಬಾರದು. ಬಹುತೇಕ ಒಂದೆರಡು ದಿನಗಳಲ್ಲಿ ಚಿರತೆ ಸಿಗುವ ಸಾಧ್ಯತೆ ಇದೆ’ ಎಂದು ಹೇಳಿದರು.

ಉಪ ವಲಯ ಅರಣ್ಯಾಧಿಕಾರಿ ಲಾಲಸಾಬ, ಅರಣ್ಯ ರಕ್ಷಕ ಕಳಕಪ್ಪ ಬ್ಯಾಳಿ, ಚಿದಾನಂದ, ಅರಣ್ಯ ವೀಕ್ಷಕರಾದ ಮಾಯಪ್ಪ, ದೇವಪ್ಪ, ಶೇಖಪ್ಪ ಹಾಗೂ ನೂರಸಾಬ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT