ಕ್ಷಯ ರೋಗ ಸಾಂಕ್ರಾಮಿಕ ರೋಗವಾಗಿದ್ದು, ಲಕ್ಷ್ಮಣ ಕಾಣಿಸಿಕೊಂಡರೆ ತಕ್ಷಣ ಪರೀಕ್ಷೆ, ಸೂಕ್ತ ಚಿಕಿತ್ಸೆ ಪಡೆದು, ವೈದ್ಯರ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಬೇರೆಯವರಿಗೆ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. 2025 ರೊಳಗೆ ಕ್ಷಯ ಮುಕ್ತ ದೇಶ ನಿರ್ಮಾಣ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕು ಎಂದು ಹೇಳಿದರು.