<p><strong>ಕೊಪ್ಪಳ</strong>: ‘ಅಂಗವಿಕಲರ ಆರೈಕೆ ಮಾಡುವುದು ಪುಣ್ಯದ ಕೆಲಸ’ ಎಂದು ನಗರಸಭೆ ಅಧ್ಯಕ್ಷ ಲತಾ ಗವಿಸಿದ್ಧಪ್ಪ ಚಿನ್ನೂರು ತಿಳಿಸಿದರು.</p>.<p>ಸಮೂಹ ಸಂಸ್ಥೆ ಹಾಗೂ ಕೇರರ್ಸ್ ವರ್ಲ್ಡ್ವೈಡ್ ಸಹಭಾಗಿತ್ವದಲ್ಲಿ ನಗರದ ಸಮೂಹ ಕ್ಯಾಂಪ್ನಲ್ಲಿ ಶನಿವಾರ ನಡೆದ ತೀವ್ರ ಪ್ರಮಾಣದ ಅಂಗವಿಕಲರ ಆರೈಕೆಯಲ್ಲಿ ತೊಡಗಿರುವ ಆರೈಕೆದಾರರಿಗೆ ಆಹಾರ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಬುದ್ಧಿಮಾಂಧ್ಯ ಹಾಗೂ ಇತರ ಹೆಚ್ಚಿನ ಅಂಗವಿಕಲತೆ ಇರುವ ಆರೈಕೆ ಮಾಡುವುದು ಕಷ್ಟದ ಕೆಲಸ. ಕೋವಿಡ್ ಸಂದರ್ಭದಲ್ಲಿ ಅಂಗವಿಕಲರಿಗೆ ನೆರವಾಗಲು ಸರ್ಕಾರಕ್ಕೆ ಕೋರಲಾಗಿದೆ ಎಂದು ತಿಳಿಸಿದರು.</p>.<p>ಸಂಸ್ಥೆಯಸಂಚಾಲಕರಾಗಿರುವಬಿ.ಹಂಪಣ್ಣ ಮಾತನಾಡಿ,‘ಸಂಸ್ಥೆಯು ಕೋವಿಡ್ ಸಂದರ್ಭದಲ್ಲಿ ದಾನಿಗಳ ನೆರವಿನಿಂದ ಅಂಗವಿಕಲರಿಗೆ ಹಾಗೂ ಆರೈಕೆದಾರರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದೆ. ಸಂಸ್ಥೆಯ ಬೆಂಬಲದಿಂದ ಜಿಲ್ಲೆಯ 187 ಆರೈಕೆದಾರರ ಕುಟುಂಬಗಳನ್ನು ಗುರುತಿಸಲಾಗಿದ್ದು, ಇನ್ನೆರೆಡು ದಿನಗಳಲ್ಲಿ ಆಹಾರ ಸಾಮಗ್ರಿ ವಿತರಿಸಲಾಗುವುದು’ ಎಂದರು.</p>.<p>ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಮಾತನಾಡಿ,‘ಕೋವಿಡ್ ಸಂದರ್ಭದಲ್ಲಿ ವಿವಿಧ ದಾನಿಗಳು ಸಾವಿರಕ್ಕೂ ಹೆಚ್ಚು ಅಂಗವಿಕಲರಿಗೆ ಆಹಾರ ಧಾನ್ಯ ಕಿಟ್ ನೀಡಿ ನೆರವಾಗಿದ್ದಾರೆ’ ಎಂದರು.</p>.<p>ಸಂಸ್ಥೆಯ ವ್ಯವಸ್ಥಾಪಕ ಎಚ್.ಎನ್.ಬಸಪ್ಪ, ಸಿಬ್ಬಂದಿ ಪ್ರಭಾಕರ, ಪ್ರಸಾದ, ಈರಮ್ಮ, ಮಲಿಯಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಅಂಗವಿಕಲರ ಆರೈಕೆ ಮಾಡುವುದು ಪುಣ್ಯದ ಕೆಲಸ’ ಎಂದು ನಗರಸಭೆ ಅಧ್ಯಕ್ಷ ಲತಾ ಗವಿಸಿದ್ಧಪ್ಪ ಚಿನ್ನೂರು ತಿಳಿಸಿದರು.</p>.<p>ಸಮೂಹ ಸಂಸ್ಥೆ ಹಾಗೂ ಕೇರರ್ಸ್ ವರ್ಲ್ಡ್ವೈಡ್ ಸಹಭಾಗಿತ್ವದಲ್ಲಿ ನಗರದ ಸಮೂಹ ಕ್ಯಾಂಪ್ನಲ್ಲಿ ಶನಿವಾರ ನಡೆದ ತೀವ್ರ ಪ್ರಮಾಣದ ಅಂಗವಿಕಲರ ಆರೈಕೆಯಲ್ಲಿ ತೊಡಗಿರುವ ಆರೈಕೆದಾರರಿಗೆ ಆಹಾರ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಬುದ್ಧಿಮಾಂಧ್ಯ ಹಾಗೂ ಇತರ ಹೆಚ್ಚಿನ ಅಂಗವಿಕಲತೆ ಇರುವ ಆರೈಕೆ ಮಾಡುವುದು ಕಷ್ಟದ ಕೆಲಸ. ಕೋವಿಡ್ ಸಂದರ್ಭದಲ್ಲಿ ಅಂಗವಿಕಲರಿಗೆ ನೆರವಾಗಲು ಸರ್ಕಾರಕ್ಕೆ ಕೋರಲಾಗಿದೆ ಎಂದು ತಿಳಿಸಿದರು.</p>.<p>ಸಂಸ್ಥೆಯಸಂಚಾಲಕರಾಗಿರುವಬಿ.ಹಂಪಣ್ಣ ಮಾತನಾಡಿ,‘ಸಂಸ್ಥೆಯು ಕೋವಿಡ್ ಸಂದರ್ಭದಲ್ಲಿ ದಾನಿಗಳ ನೆರವಿನಿಂದ ಅಂಗವಿಕಲರಿಗೆ ಹಾಗೂ ಆರೈಕೆದಾರರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದೆ. ಸಂಸ್ಥೆಯ ಬೆಂಬಲದಿಂದ ಜಿಲ್ಲೆಯ 187 ಆರೈಕೆದಾರರ ಕುಟುಂಬಗಳನ್ನು ಗುರುತಿಸಲಾಗಿದ್ದು, ಇನ್ನೆರೆಡು ದಿನಗಳಲ್ಲಿ ಆಹಾರ ಸಾಮಗ್ರಿ ವಿತರಿಸಲಾಗುವುದು’ ಎಂದರು.</p>.<p>ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಮಾತನಾಡಿ,‘ಕೋವಿಡ್ ಸಂದರ್ಭದಲ್ಲಿ ವಿವಿಧ ದಾನಿಗಳು ಸಾವಿರಕ್ಕೂ ಹೆಚ್ಚು ಅಂಗವಿಕಲರಿಗೆ ಆಹಾರ ಧಾನ್ಯ ಕಿಟ್ ನೀಡಿ ನೆರವಾಗಿದ್ದಾರೆ’ ಎಂದರು.</p>.<p>ಸಂಸ್ಥೆಯ ವ್ಯವಸ್ಥಾಪಕ ಎಚ್.ಎನ್.ಬಸಪ್ಪ, ಸಿಬ್ಬಂದಿ ಪ್ರಭಾಕರ, ಪ್ರಸಾದ, ಈರಮ್ಮ, ಮಲಿಯಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>