<p><strong>ಕೊಪ್ಪಳ: </strong>ಗಂಗಾವತಿ ತಾಲ್ಲೂಕಿನ ಅಂಜನಾದ್ರಿಗೆ ಶುಕ್ರವಾರ ಭೇಟಿ ನೀಡಿದ್ದತುಮಕೂರಿನ ಹಿಂದೂಪರ ಕಾರ್ಯಕರ್ತ ‘ಮಧುಗಿರಿ ಮೋದಿ’ ಅಲಿಯಾಸ್ ಅತುಲ್ಕುಮಾರ್ ಸಬರವಾಲ್, ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿ ಬಿಟ್ಟಿದ್ದಕ್ಕೆಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.</p>.<p>ಆಂಜನೇಯನ ದರ್ಶನಕ್ಕೆ ಬಂದಿದ್ದ ಅವರು, ‘ಹಿಂದೂ ಧರ್ಮದ ಮೇಲೆ ನಂಬಿಕೆ ಇಡದ, ಜೈ ಶ್ರೀರಾಮ್ ಹೇಳದ ಮುಸ್ಲಿಮರು ಇಲ್ಲಿ ವ್ಯಾಪಾರ ನಡೆಸುತ್ತಿರುವುದು ಖಂಡನೀಯ, ಬೇಗ ಜಾಗ ತೆರವುಗೊಳಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಕೂಗಾಡಿದ್ದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿಹಾಕಿದ್ದರು.</p>.<p>‘ಇಲ್ಲಿ ಅನ್ಯ ಧರ್ಮಿಯರು ಅಂಗಡಿಗಳನ್ನು ನಡೆಸುವಂತಿಲ್ಲ. ಇಲ್ಲಿಂದ ಕೂಡಲೇ ಅಂಗಡಿ ಮುಂಗಟ್ಟುಗಳನ್ನು ಎತ್ತಿಕೊಂಡು ಹೋಗಬೇಕು. ಮುಂದಿನ ದಿನಗಳಲ್ಲಿ ನಾನು ಇಲ್ಲಿಗೆ ಬಂದಾಗ ಮುಸ್ಲಿಮರ ಅಂಗಡಿಗಳು ನನ್ನ ಕಣ್ಣಿಗೆ ಕಾಣಬಾರದು’ ಎಂದು ಬೆದರಿಕೆ ಹಾಕಿದ್ದರು.</p>.<p>ವಿವಿಧ ಸಂಘಟನೆಗಳವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಸ್ಥಳಕ್ಕೆತಹಶೀಲ್ದಾರ್ ಯು.ನಾಗರಾಜ ತೆರಳಿ ಪರಿಶೀಲನೆ ನಡೆಸಿದರು. ಅಷ್ಟೊತ್ತಿಗೆ ಅವರು ಬೇರೆಡೆಗೆ ತೆರಳಿದ್ದರು. ನಂತರ ತಹಶೀಲ್ದಾರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಕೋಮು ವೈಷಮ್ಯ ಬಿತ್ತಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮಧುಗಿರಿ ಮೋದಿ’ಯನ್ನು ಇನ್ನೂ ಬಂಧಿಸಿಲ್ಲ ಎಂದುತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಗಂಗಾವತಿ ತಾಲ್ಲೂಕಿನ ಅಂಜನಾದ್ರಿಗೆ ಶುಕ್ರವಾರ ಭೇಟಿ ನೀಡಿದ್ದತುಮಕೂರಿನ ಹಿಂದೂಪರ ಕಾರ್ಯಕರ್ತ ‘ಮಧುಗಿರಿ ಮೋದಿ’ ಅಲಿಯಾಸ್ ಅತುಲ್ಕುಮಾರ್ ಸಬರವಾಲ್, ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿ ಬಿಟ್ಟಿದ್ದಕ್ಕೆಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.</p>.<p>ಆಂಜನೇಯನ ದರ್ಶನಕ್ಕೆ ಬಂದಿದ್ದ ಅವರು, ‘ಹಿಂದೂ ಧರ್ಮದ ಮೇಲೆ ನಂಬಿಕೆ ಇಡದ, ಜೈ ಶ್ರೀರಾಮ್ ಹೇಳದ ಮುಸ್ಲಿಮರು ಇಲ್ಲಿ ವ್ಯಾಪಾರ ನಡೆಸುತ್ತಿರುವುದು ಖಂಡನೀಯ, ಬೇಗ ಜಾಗ ತೆರವುಗೊಳಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಕೂಗಾಡಿದ್ದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿಹಾಕಿದ್ದರು.</p>.<p>‘ಇಲ್ಲಿ ಅನ್ಯ ಧರ್ಮಿಯರು ಅಂಗಡಿಗಳನ್ನು ನಡೆಸುವಂತಿಲ್ಲ. ಇಲ್ಲಿಂದ ಕೂಡಲೇ ಅಂಗಡಿ ಮುಂಗಟ್ಟುಗಳನ್ನು ಎತ್ತಿಕೊಂಡು ಹೋಗಬೇಕು. ಮುಂದಿನ ದಿನಗಳಲ್ಲಿ ನಾನು ಇಲ್ಲಿಗೆ ಬಂದಾಗ ಮುಸ್ಲಿಮರ ಅಂಗಡಿಗಳು ನನ್ನ ಕಣ್ಣಿಗೆ ಕಾಣಬಾರದು’ ಎಂದು ಬೆದರಿಕೆ ಹಾಕಿದ್ದರು.</p>.<p>ವಿವಿಧ ಸಂಘಟನೆಗಳವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಸ್ಥಳಕ್ಕೆತಹಶೀಲ್ದಾರ್ ಯು.ನಾಗರಾಜ ತೆರಳಿ ಪರಿಶೀಲನೆ ನಡೆಸಿದರು. ಅಷ್ಟೊತ್ತಿಗೆ ಅವರು ಬೇರೆಡೆಗೆ ತೆರಳಿದ್ದರು. ನಂತರ ತಹಶೀಲ್ದಾರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಕೋಮು ವೈಷಮ್ಯ ಬಿತ್ತಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮಧುಗಿರಿ ಮೋದಿ’ಯನ್ನು ಇನ್ನೂ ಬಂಧಿಸಿಲ್ಲ ಎಂದುತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>