<p><strong>ಕೊಪ್ಪಳ: </strong>ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಯಲಬುರ್ಗಾದ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಇಬ್ಬರು ವ್ಯಕ್ತಿಗಳಿಗೆ ಶನಿವಾರ ದಂಡ ಸಹಿತ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ನ್ಯಾಯಾಧೀಶ ಶ್ರೀಶೈಲ ಬಾಗಡಿ ಅವರು ಅಪರಾಧಿಗಳಾದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬ್ಯಾಲವಾಡಗಿ ಗ್ರಾಮದ ಸದ್ದಾಂ ಹುಸೇನ ಭಾಷಾಸಾಬ್ ಪೈಲ್ವಾನ ಹಾಗೂ ಮುಂಡರಗಿ ತಾಲ್ಲೂಕಿನ ಪೇಠಾಲೂರು ಗ್ರಾಮದ ಆಶ್ರಯ ಕಾಲೊನಿಯ ಜಿಲಾನಿ ಜಾತಗಾರ ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದ್ದಾರೆ.</p>.<p>ಆರೋಪಿಗಳು ಬೂನಕೊಪ್ಪ ಸೀಮಾದಲ್ಲಿರುವ ಹಗೇದಾಳ ಗ್ರಾಮದ ರೈತ ಚಿದಾನಂದಪ್ಪ ಕಮ್ಮಾರ ಅವರ ಜಮೀನಿನಲ್ಲಿರುವ ದನದ ಸೆಡ್ಡಿನಲ್ಲಿದ್ದ 2 ಎತ್ತು, 2 ಆಕಳನ್ನು 2020ರಲ್ಲಿ ರಾತ್ರಿ ವೇಳೆ ಕಳ್ಳತನ ಮಾಡಿಕೊಂಡು ಹೋಗಿ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದರು. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ರೈತ ಪ್ರಕರಣ ದಾಖಲಿಸಿದ್ದರು.</p>.<p>ಪ್ರಕರಣದ ತನಿಖೆ ಬೆನ್ನತ್ತಿದ ಅಂದಿನ ಪಿ.ಎಸ್.ಐ. ಹನಮಂತಪ್ಪ ತಳವಾರ ಹಾಗೂ ಸಿಪಿಐ ಎಂ.ನಾಗರೆಡ್ಡಿ ಅವರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಅಬೀದುಲ್ಲಾ ಇಮಾಮಸಾಬ್ ಹಾದಿಮನಿ ಅವರು ವಾದ ಮಂಡಿಸಿದ್ದಾರೆ.</p>.<p>ಪ್ರಕರಣ ಬೇಧಿಸಿ ಆರೋಪಿಗಳಿಗೆ ಶಿಕ್ಷೆಯಾಗಲು ಶ್ರಮಿಸಿದ ಸಿಪಿಐ ನಾಗರೆಡ್ಡಿ ಮತ್ತು ಅವರ ತಂಡಕ್ಕೆ ಎಸ್ಪಿ ಬಹುಮಾನ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಯಲಬುರ್ಗಾದ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಇಬ್ಬರು ವ್ಯಕ್ತಿಗಳಿಗೆ ಶನಿವಾರ ದಂಡ ಸಹಿತ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ನ್ಯಾಯಾಧೀಶ ಶ್ರೀಶೈಲ ಬಾಗಡಿ ಅವರು ಅಪರಾಧಿಗಳಾದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬ್ಯಾಲವಾಡಗಿ ಗ್ರಾಮದ ಸದ್ದಾಂ ಹುಸೇನ ಭಾಷಾಸಾಬ್ ಪೈಲ್ವಾನ ಹಾಗೂ ಮುಂಡರಗಿ ತಾಲ್ಲೂಕಿನ ಪೇಠಾಲೂರು ಗ್ರಾಮದ ಆಶ್ರಯ ಕಾಲೊನಿಯ ಜಿಲಾನಿ ಜಾತಗಾರ ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದ್ದಾರೆ.</p>.<p>ಆರೋಪಿಗಳು ಬೂನಕೊಪ್ಪ ಸೀಮಾದಲ್ಲಿರುವ ಹಗೇದಾಳ ಗ್ರಾಮದ ರೈತ ಚಿದಾನಂದಪ್ಪ ಕಮ್ಮಾರ ಅವರ ಜಮೀನಿನಲ್ಲಿರುವ ದನದ ಸೆಡ್ಡಿನಲ್ಲಿದ್ದ 2 ಎತ್ತು, 2 ಆಕಳನ್ನು 2020ರಲ್ಲಿ ರಾತ್ರಿ ವೇಳೆ ಕಳ್ಳತನ ಮಾಡಿಕೊಂಡು ಹೋಗಿ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದರು. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ರೈತ ಪ್ರಕರಣ ದಾಖಲಿಸಿದ್ದರು.</p>.<p>ಪ್ರಕರಣದ ತನಿಖೆ ಬೆನ್ನತ್ತಿದ ಅಂದಿನ ಪಿ.ಎಸ್.ಐ. ಹನಮಂತಪ್ಪ ತಳವಾರ ಹಾಗೂ ಸಿಪಿಐ ಎಂ.ನಾಗರೆಡ್ಡಿ ಅವರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಅಬೀದುಲ್ಲಾ ಇಮಾಮಸಾಬ್ ಹಾದಿಮನಿ ಅವರು ವಾದ ಮಂಡಿಸಿದ್ದಾರೆ.</p>.<p>ಪ್ರಕರಣ ಬೇಧಿಸಿ ಆರೋಪಿಗಳಿಗೆ ಶಿಕ್ಷೆಯಾಗಲು ಶ್ರಮಿಸಿದ ಸಿಪಿಐ ನಾಗರೆಡ್ಡಿ ಮತ್ತು ಅವರ ತಂಡಕ್ಕೆ ಎಸ್ಪಿ ಬಹುಮಾನ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>