<p><strong>ಗಂಗಾವತಿ</strong>: ಮೊಹರಂ ಎಲ್ಲಾ ಸಮಾಜದವರು ಒಗ್ಗಟ್ಟಾಗಿ ಆಚರಿಸುವ ಹಬ್ಬವಾಗಿದ್ದು, ಈ ಹಬ್ಬವನ್ನ ಭಾವೈಕ್ಯತೆ ಜೊತೆಗೆ ಶಾಂತಿಯುತವಾಗಿ ಆಚರಿಸಬೇಕು’ ಎಂದು ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಮಾಟೀಲ ಹೇಳಿದರು.</p>.<p>ನಗರದ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಮೊಹರಂ ಹಬ್ಬ ಆಚರಣೆ ಬಗ್ಗೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಮೊಹರಂ ಹಬ್ಬದ ಆಚರಣೆ ಅರಿತುಕೊಂಡು ಅಚ್ಚುಕಟ್ಟಾಗಿ ಆಚರಿಸಬೇಕು. ಯಾವುದೇ ಕಾರಣಕ್ಕೆ ವೈಯಕ್ತಿಕ ಕಾರಣಗಳಿಗೆ ಆಚರಣೆ ವೇಳೆ ಗೊಂದಲ ಸೃಷ್ಟಿಸಿ, ಗಲಾಟೆ ಮಾಡುವಂತಿಲ್ಲ. ಹಿಂದೂ-ಮುಸ್ಲಿಂ ಸಮಾಜದವರು ಭಾವೈಕ್ಯತೆಯಿಂದ ಆಚರಣೆ ಮಾಡುವ ಹಬ್ಬ ಇದಾಗಿದ್ದು, ಎಲ್ಲರೂ ಅನ್ಯೋನ್ಯತೆಯಿಂದ ಹಬ್ಬ ಆಚರಿಸಬೇಕು’ಎಂದರು.</p>.<p>‘ಹಬ್ಬ ಆಚರಣೆ ನೆಪದಲ್ಲಿ ಗಲಾಟೆ ಮಾಡಿದರೆ ಮುಂದಿನ ವರ್ಷದಿಂದ ಗಲಾಟೆ ನಡೆದ ಸ್ಥಳಗಳಲ್ಲಿ ತಾಲ್ಲೂಕು ಆಡಳಿತದಿಂದ ಹಬ್ಬ ನಿಷೇಧ ಮಾಡಲಾಗುತ್ತದೆ. ಮೊಹರಂ ದೇವರ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ ನಗರಸಭೆ, ಜೆಸ್ಕಾಂ ಇಲಾಖೆಯಿಂದ ವಿದ್ಯುತ್, ಕುಡಿಯುವ ನೀರು, ಸ್ವಚ್ಛತೆ ಕಾಪಾಡಲಾಗುವುದು’ ಎಂದು ಹೇಳಿದರು.<br /><br /> ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ್ ಮಾಳಿ, ನಗರ ಠಾಣೆ ಪಿಎಸ್ಐ ನಾಗರಾಜ, ನಗರಸಭೆ ವ್ಯವಸ್ಥಾಪಕ ಷಣ್ಮುಖಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಮೊಹರಂ ಎಲ್ಲಾ ಸಮಾಜದವರು ಒಗ್ಗಟ್ಟಾಗಿ ಆಚರಿಸುವ ಹಬ್ಬವಾಗಿದ್ದು, ಈ ಹಬ್ಬವನ್ನ ಭಾವೈಕ್ಯತೆ ಜೊತೆಗೆ ಶಾಂತಿಯುತವಾಗಿ ಆಚರಿಸಬೇಕು’ ಎಂದು ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಮಾಟೀಲ ಹೇಳಿದರು.</p>.<p>ನಗರದ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಮೊಹರಂ ಹಬ್ಬ ಆಚರಣೆ ಬಗ್ಗೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಮೊಹರಂ ಹಬ್ಬದ ಆಚರಣೆ ಅರಿತುಕೊಂಡು ಅಚ್ಚುಕಟ್ಟಾಗಿ ಆಚರಿಸಬೇಕು. ಯಾವುದೇ ಕಾರಣಕ್ಕೆ ವೈಯಕ್ತಿಕ ಕಾರಣಗಳಿಗೆ ಆಚರಣೆ ವೇಳೆ ಗೊಂದಲ ಸೃಷ್ಟಿಸಿ, ಗಲಾಟೆ ಮಾಡುವಂತಿಲ್ಲ. ಹಿಂದೂ-ಮುಸ್ಲಿಂ ಸಮಾಜದವರು ಭಾವೈಕ್ಯತೆಯಿಂದ ಆಚರಣೆ ಮಾಡುವ ಹಬ್ಬ ಇದಾಗಿದ್ದು, ಎಲ್ಲರೂ ಅನ್ಯೋನ್ಯತೆಯಿಂದ ಹಬ್ಬ ಆಚರಿಸಬೇಕು’ಎಂದರು.</p>.<p>‘ಹಬ್ಬ ಆಚರಣೆ ನೆಪದಲ್ಲಿ ಗಲಾಟೆ ಮಾಡಿದರೆ ಮುಂದಿನ ವರ್ಷದಿಂದ ಗಲಾಟೆ ನಡೆದ ಸ್ಥಳಗಳಲ್ಲಿ ತಾಲ್ಲೂಕು ಆಡಳಿತದಿಂದ ಹಬ್ಬ ನಿಷೇಧ ಮಾಡಲಾಗುತ್ತದೆ. ಮೊಹರಂ ದೇವರ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ ನಗರಸಭೆ, ಜೆಸ್ಕಾಂ ಇಲಾಖೆಯಿಂದ ವಿದ್ಯುತ್, ಕುಡಿಯುವ ನೀರು, ಸ್ವಚ್ಛತೆ ಕಾಪಾಡಲಾಗುವುದು’ ಎಂದು ಹೇಳಿದರು.<br /><br /> ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ್ ಮಾಳಿ, ನಗರ ಠಾಣೆ ಪಿಎಸ್ಐ ನಾಗರಾಜ, ನಗರಸಭೆ ವ್ಯವಸ್ಥಾಪಕ ಷಣ್ಮುಖಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>