<p><strong>ಕೊಪ್ಪಳ</strong>: ತಾಲ್ಲೂಕಿನ ಮಂಗಳಾಪುರದ ಜನರಿಗೆ ಸಮಸ್ಯೆಯಾಗಿದ್ದ ಸ್ಮಶಾನ ಜಾಗದ ಕೊರತೆಯನ್ನು ಜಿಲ್ಲಾಡಳಿತ ನೀಗಿಸಿದ್ದು, 20 ಗಂಟೆ ಸರ್ಕಾರಿ ಭೂಮಿಯನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.</p>.<p>ಗ್ರಾಮದ ಜನರಿಗೆ ಸ್ಮಶಾನ ಜಾಗದ ಕೊರತೆಯಿದ್ದ ಕಾರಣ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡು ಆಡಳಿತದ ವಿರುದ್ಧ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಆಗ ಅಧಿಕಾರಿಗಳು ಗ್ರಾಮಸ್ಥರ ಜೊತೆ ಚರ್ಚಿಸಿದ ಬಳಿಕ ಸರ್ಕಾರಿ ಜಮೀನು ರುದ್ರಭೂಮಿಗಾಗಿ ಮೀಸಲಿಟ್ಟು ಆದೇಶ ಹೊರಡಿಸಿದ್ದಾರೆ.</p>.<p>ಈಗಿರುವ ಜಮೀನು ಮಂಗಳಾಪುರ ಗ್ರಾಮದಿಂದ ಒಂದು ಕಿ.ಮೀ. ದೂರದಲ್ಲಿದ್ದು, ರಸ್ತೆ ಸಂಪರ್ಕ ಇರುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ತಾಲ್ಲೂಕಿನ ಮಂಗಳಾಪುರದ ಜನರಿಗೆ ಸಮಸ್ಯೆಯಾಗಿದ್ದ ಸ್ಮಶಾನ ಜಾಗದ ಕೊರತೆಯನ್ನು ಜಿಲ್ಲಾಡಳಿತ ನೀಗಿಸಿದ್ದು, 20 ಗಂಟೆ ಸರ್ಕಾರಿ ಭೂಮಿಯನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.</p>.<p>ಗ್ರಾಮದ ಜನರಿಗೆ ಸ್ಮಶಾನ ಜಾಗದ ಕೊರತೆಯಿದ್ದ ಕಾರಣ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡು ಆಡಳಿತದ ವಿರುದ್ಧ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಆಗ ಅಧಿಕಾರಿಗಳು ಗ್ರಾಮಸ್ಥರ ಜೊತೆ ಚರ್ಚಿಸಿದ ಬಳಿಕ ಸರ್ಕಾರಿ ಜಮೀನು ರುದ್ರಭೂಮಿಗಾಗಿ ಮೀಸಲಿಟ್ಟು ಆದೇಶ ಹೊರಡಿಸಿದ್ದಾರೆ.</p>.<p>ಈಗಿರುವ ಜಮೀನು ಮಂಗಳಾಪುರ ಗ್ರಾಮದಿಂದ ಒಂದು ಕಿ.ಮೀ. ದೂರದಲ್ಲಿದ್ದು, ರಸ್ತೆ ಸಂಪರ್ಕ ಇರುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>