<p><strong>ತಾವರಗೇರಾ: </strong>ಸತತ ಐದು ವರ್ಷಗಳಿಂದ ಉಂಟಾಗಿದ್ದ ಬರಗಾಲಕ್ಕೆ ತತ್ತರಿಸಿದ್ದ ಮುದೇನೂರು ಹೋಬಳಿ ವ್ಯಾಪ್ತಿಯ ವಿವಿಧೆಡೆ ಉತ್ತಮ ಮಳೆಯಾಗಿದೆ.</p>.<p>ಕಳೆದ 25 ದಿನಗಳಿಂದ ಸುರಿದ ಮಳೆಗೆ ಚೆಕ್ ಡ್ಯಾಂ, ಕೆರೆಗಳು, ಹಳ್ಳ ಹಾಗೂ ನಾಲೆಗಳು ತುಂಬಿ ಹರಿಯುತ್ತಿವೆ. ಇದು ರೈತರ ಮುಖದಲ್ಲಿ ಸಂತಸ ಮೂಡಿಸಿದೆ.</p>.<p>ಕಳೆದ ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಚೆಕ್ ಡ್ಯಾಂ, ಕೃಷಿ ಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿತ್ತು. ಆದರೆ, ಮಳೆ ಬಾರದ ಕಾರಣ ಅವು ತುಂಬಿರಲಿಲ್ಲ.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕೃಷಿ ಭಾಗ್ಯ ಯೋಜನೆ ಅಡಿ ಚೆಕ್ ಡ್ಯಾಂ, ಕೃಷಿ ಹೊಂಡಗಳನ್ನು ನಿರ್ಮಿಸಲಾಗಿತ್ತು.</p>.<p>ಹೋಬಳಿ ವ್ಯಾಪ್ತಿಯ ಕೆ.ಬೆಂಚಮಟ್ಟಿ, ಮುದ್ದಲಗುಂದಿ ಹಾಗೂ ಜುಮಲಾಪೂರ, ಕಿಲಾರಹಟ್ಟಿ, ಶಿರಗುಂಪಿ, ಮುದೇನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಉತ್ತಮ ಮಳೆ ಆಗಿದೆ.</p>.<p>ಮುದೇನೂರು ಮುಖ್ಯರಸ್ತೆ ಪಕ್ಕದ ಕೆ.ಬೆಂಚಮಟ್ಟಿ, ಬನ್ನಟ್ಟಿ ನಾಲೆಗಳಿಗೆ ನಿರ್ಮಿಸಿದ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.</p>.<p><strong>ಅಂತರ್ಜಲ ವೃದ್ಧಿ: </strong>ಅಂತರ್ಜಲ ಮರುಪೂರಣ ಘಟಕಕ್ಕೆ ಹಣ ವ್ಯಯಿಸುವುದಕ್ಕಿಂತ ಚೆಕ್ ಡ್ಯಾಂ, ಹಳ್ಳ, ಕೆರೆಗಳಲ್ಲಿ ನೀರು ಸಂಗ್ರಹ ಮಾಡಿದರೆ ಅಂತರ್ಜಲ ತಾನಾಗಿಯೇ ವೃದ್ಧಿಯಾಗುತ್ತದೆ ಎನ್ನುತ್ತಾರೆ ರೈತ ಹನುಮಂತ ಬೆಂಚಮಟ್ಟಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತಾವರಗೇರಾ: </strong>ಸತತ ಐದು ವರ್ಷಗಳಿಂದ ಉಂಟಾಗಿದ್ದ ಬರಗಾಲಕ್ಕೆ ತತ್ತರಿಸಿದ್ದ ಮುದೇನೂರು ಹೋಬಳಿ ವ್ಯಾಪ್ತಿಯ ವಿವಿಧೆಡೆ ಉತ್ತಮ ಮಳೆಯಾಗಿದೆ.</p>.<p>ಕಳೆದ 25 ದಿನಗಳಿಂದ ಸುರಿದ ಮಳೆಗೆ ಚೆಕ್ ಡ್ಯಾಂ, ಕೆರೆಗಳು, ಹಳ್ಳ ಹಾಗೂ ನಾಲೆಗಳು ತುಂಬಿ ಹರಿಯುತ್ತಿವೆ. ಇದು ರೈತರ ಮುಖದಲ್ಲಿ ಸಂತಸ ಮೂಡಿಸಿದೆ.</p>.<p>ಕಳೆದ ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಚೆಕ್ ಡ್ಯಾಂ, ಕೃಷಿ ಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿತ್ತು. ಆದರೆ, ಮಳೆ ಬಾರದ ಕಾರಣ ಅವು ತುಂಬಿರಲಿಲ್ಲ.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕೃಷಿ ಭಾಗ್ಯ ಯೋಜನೆ ಅಡಿ ಚೆಕ್ ಡ್ಯಾಂ, ಕೃಷಿ ಹೊಂಡಗಳನ್ನು ನಿರ್ಮಿಸಲಾಗಿತ್ತು.</p>.<p>ಹೋಬಳಿ ವ್ಯಾಪ್ತಿಯ ಕೆ.ಬೆಂಚಮಟ್ಟಿ, ಮುದ್ದಲಗುಂದಿ ಹಾಗೂ ಜುಮಲಾಪೂರ, ಕಿಲಾರಹಟ್ಟಿ, ಶಿರಗುಂಪಿ, ಮುದೇನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಉತ್ತಮ ಮಳೆ ಆಗಿದೆ.</p>.<p>ಮುದೇನೂರು ಮುಖ್ಯರಸ್ತೆ ಪಕ್ಕದ ಕೆ.ಬೆಂಚಮಟ್ಟಿ, ಬನ್ನಟ್ಟಿ ನಾಲೆಗಳಿಗೆ ನಿರ್ಮಿಸಿದ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.</p>.<p><strong>ಅಂತರ್ಜಲ ವೃದ್ಧಿ: </strong>ಅಂತರ್ಜಲ ಮರುಪೂರಣ ಘಟಕಕ್ಕೆ ಹಣ ವ್ಯಯಿಸುವುದಕ್ಕಿಂತ ಚೆಕ್ ಡ್ಯಾಂ, ಹಳ್ಳ, ಕೆರೆಗಳಲ್ಲಿ ನೀರು ಸಂಗ್ರಹ ಮಾಡಿದರೆ ಅಂತರ್ಜಲ ತಾನಾಗಿಯೇ ವೃದ್ಧಿಯಾಗುತ್ತದೆ ಎನ್ನುತ್ತಾರೆ ರೈತ ಹನುಮಂತ ಬೆಂಚಮಟ್ಟಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>