ತಾಲ್ಲೂಕಿನ ಜಂಗಮರ ಕಲ್ಗುಡಿ, ಹೊಸ್ಕೇರಾ, ಬೂದಗುಂಪಾ, ಶ್ರೀರಾಮನಗರ ಸೇರಿದಂತೆ ನಾನಾ ಭಾಗಗಳಲ್ಲಿ ರೈತರು ಭತ್ತದ ಬೆಳೆಗೆ ಕ್ರಿಮಿನಾಶಕ ಸಿಂಪಡಿಸಲು ಡ್ರೋನ್ ಮೊರೆ ಹೋಗಿದ್ದಾರೆ. ಇದರಿಂದ ಕೂಲಿಕಾರ್ಮಿಕರಿಗಾಗಿ ಕಾಯುವಂತಹ ಪ್ರಮೇಯ ಬರುವುದಿಲ್ಲ ಮತ್ತು ಹೆಚ್ಚಿನ ಕೂಲಿ ಹಣ ನೀಡುವಂತಹ ಪ್ರಸಂಗವೂ ಬರುವುದಿಲ್ಲ ಎನ್ನುತ್ತಾರೆ ಅವರು.