ರೈತ ಶಿವನಗೌಡ ಪಾಟೀಲ ಮಾತನಾಡಿ,‘ಬೆಳೆಯಲ್ಲಿ ವೈವಿಧ್ಯತೆ ಇರಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೆ ಸಿರಿಧಾನ್ಯಗಳತ್ತ ರೈತರು ಗಮನಹರಿಸಬೇಕು’ ಎಂದರು. ಹೂಲಗೇರಿಯ ದುರ್ಗಾದೇವಿ ಮಹಿಳಾ ಸಂಘದ ಸದಸ್ಯ ಲಕ್ಷ್ಮಿ ಸಂಘ ಬೆಳೆದು ಬಂದ ರೀತಿ, ಬೆಳೆ ವಿಮೆ ಯೋಜನೆಯಲ್ಲಿ ರೈತರ ಪಾಲ್ಗೊಳ್ಳುವಿಕೆ ಮತ್ತು ಯೋಜನೆಗಳ ಪ್ರಯೋಜನ, ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುರಿತು ಅನುಭವ ಹಂಚಿಕೊಂಡರು.ಕೃಷಿ ಸಹಾಯಕ ನಿರ್ದೇಶಕ ವಿ.ತಿಪ್ಪೇಸ್ವಾಮಿ ಕೃಷಿ ಇಲಾಖೆಯ ಪ್ರಮುಖ ಯೋಜನೆಗಳು, ಬೆಳೆವಿಮೆಯಿಂದ ಆಗುವ ಅನುಕೂಲ, ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಿದರು. ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ನಿರೂಪಿಸಿದರು. ಅನೇಕ ರೈತರು, ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.