‘ಮಾರುತಿ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಇಲ್ಲ. ಪ್ರತಿ ಅಮಾವಾಸ್ಯೆ, ಇತರ ಸಂದರ್ಭಗಳಲ್ಲಿ ನೂರಾರು ಭಕ್ತರು ಅಲ್ಲಿಗೆ ಬರುತ್ತಿರುತ್ತಾರೆ. ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಹೇಳುತ್ತ ಬಂದರೂ ಜೆಸ್ಕಾಂ ಕ್ರಮ ಕೈಗೊಂಡಿಲ್ಲ. ಚುನಾಯಿತ ಪ್ರತಿನಿಧಿಯಾದ ನನ್ನನ್ನು ಜನರು ನಿಂದಿಸುತ್ತಿದ್ದಾರೆ’ ಎಂದು ಮಹಾಂತೇಶ ಕಿಡಿಕಾರಿದರು.