<p><strong>ಕಾರಟಗಿ</strong>: ‘ಮಕ್ಕಳ ಜೀವನ ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರು ಮಕ್ಕಳನ್ನು ಪಠ್ಯೇತರ ಚಟುವಟಿಕೆಯಲ್ಲಿಯೂ ಕ್ರಿಯಾಶೀಲವಾಗಿರುವಂತೆ ಮಾಡಬೇಕು. ಪೋಷಕರು, ಶಿಕ್ಷಕರು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಮಕ್ಕಳ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುತ್ತದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮೀದೇವಿ ಹೇಳಿದರು.</p>.<p>ಸಮೀಪದ ಬೇವಿನಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಬದುಕು ರೂಪಿಸುವ ಜೊತೆಗೆ ಜೀವನ ಪಾಠದ ತರಬೇತಿಯನ್ನೂ ನೀಡಬೇಕು. ಮಕ್ಕಳ ಉಜ್ವಲ ಭವಿಷ್ಯಕ್ಕೆ ಒಳ್ಳೆಯ ಗುರು ಹಾಗೂ ಗುರಿ ಅಗತ್ಯ’ ಎಂದರು.</p>.<p>ಗ್ರಾಪಂ ಸದಸ್ಯೆ ಲಕ್ಷ್ಮೀ ಮಲ್ಲಯ್ಯ, ಮಾಜಿ ಎಪಿಎಂಸಿ ನಿರ್ದೇಶಕ ಶಿವಪ್ಪ ಆರಾಪುರ, ಎಸ್ಡಿಎಂಸಿ ಅಧ್ಯಕ್ಷ ಶರಣಪ್ಪ ಬೇವಿನಹಾಳ, ಉಪಾಧ್ಯಕ್ಷ ಬಸವರಾಜ, ಪಿಡಿಒ ಪ್ರಕಾಶ ಹಿರೇಮಠ, ಸಿಆರ್ಪಿ ತಿಮ್ಮಣ್ಣ ನಾಯಕ, ಮಲ್ಲೇಶ.ಕೆ, ಶಿಕ್ಷಕ ರಂಗಪ್ಪ, ಭಾಗೀರಥಿ, ಹನುಮಂತಪ್ಪ.ಕೆ, ಅಂಬಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ</strong>: ‘ಮಕ್ಕಳ ಜೀವನ ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರು ಮಕ್ಕಳನ್ನು ಪಠ್ಯೇತರ ಚಟುವಟಿಕೆಯಲ್ಲಿಯೂ ಕ್ರಿಯಾಶೀಲವಾಗಿರುವಂತೆ ಮಾಡಬೇಕು. ಪೋಷಕರು, ಶಿಕ್ಷಕರು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಮಕ್ಕಳ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುತ್ತದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮೀದೇವಿ ಹೇಳಿದರು.</p>.<p>ಸಮೀಪದ ಬೇವಿನಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಬದುಕು ರೂಪಿಸುವ ಜೊತೆಗೆ ಜೀವನ ಪಾಠದ ತರಬೇತಿಯನ್ನೂ ನೀಡಬೇಕು. ಮಕ್ಕಳ ಉಜ್ವಲ ಭವಿಷ್ಯಕ್ಕೆ ಒಳ್ಳೆಯ ಗುರು ಹಾಗೂ ಗುರಿ ಅಗತ್ಯ’ ಎಂದರು.</p>.<p>ಗ್ರಾಪಂ ಸದಸ್ಯೆ ಲಕ್ಷ್ಮೀ ಮಲ್ಲಯ್ಯ, ಮಾಜಿ ಎಪಿಎಂಸಿ ನಿರ್ದೇಶಕ ಶಿವಪ್ಪ ಆರಾಪುರ, ಎಸ್ಡಿಎಂಸಿ ಅಧ್ಯಕ್ಷ ಶರಣಪ್ಪ ಬೇವಿನಹಾಳ, ಉಪಾಧ್ಯಕ್ಷ ಬಸವರಾಜ, ಪಿಡಿಒ ಪ್ರಕಾಶ ಹಿರೇಮಠ, ಸಿಆರ್ಪಿ ತಿಮ್ಮಣ್ಣ ನಾಯಕ, ಮಲ್ಲೇಶ.ಕೆ, ಶಿಕ್ಷಕ ರಂಗಪ್ಪ, ಭಾಗೀರಥಿ, ಹನುಮಂತಪ್ಪ.ಕೆ, ಅಂಬಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>