<p><strong>ಕೊಪ್ಪಳ</strong>: ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ <br />ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಆರು ವರ್ಷದ ಮಗು ಆಹುತಿಯಾಗಿದೆ.</p>.<p>ಹನುಮಪ್ಪ ಅಬ್ಬಿಗೇರಿ ಎಂಬುವವರದ್ದು ಬನಶಂಕರಿ ಕಿರಾಣಿ ಅಂಗಡಿ ಮನೆಯಲ್ಲಿಯೇ ಇದ್ದು, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಮನೆ ವಸ್ತುಗಳಿಗೆ ತಗುಲಿದೆ. ಮನೆಯಲ್ಲಿದ್ದ ತನ್ನ ಮೂರು ಮಕ್ಕಳನ್ನು ಹನುಮಪ್ಪ ಅಬ್ಬಿಗೇರಿ ರಕ್ಷಿಸಲು ಮುಂದಾಗಿದ್ದು, 8 ವರ್ಷದ ಮಗು ಶಂಕರರಾಜನನ್ನು ಹೊರಕ್ಕೆ ಎತ್ತಿಕೊಂಡು ಬಂದಿದ್ದಾರೆ. 11 ವರ್ಷದ ಮಗು ವಿನೋದ ರಾಜನನ್ನು ಸಹ ಹೊರ ತಂದಿದ್ದಾರೆ. ಈ ಬಾಲಕನಿಗೆ ಸುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗು ಎಂಟು ವರ್ಷದ ಜಯರಾಜ ಎಲ್ಲಿದ್ದಾನೆ ಎನ್ನುವುದನ್ನು ಹುಡುಕುವ ವೇಳೆಗೆ ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಜಯರಾಜ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದ್ದಾನೆ</p>.<p>ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಇಒ ರಾಮಣ್ಣ ದೊಡ್ಮನಿ ಹಾಗು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವರದಿ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ <br />ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಆರು ವರ್ಷದ ಮಗು ಆಹುತಿಯಾಗಿದೆ.</p>.<p>ಹನುಮಪ್ಪ ಅಬ್ಬಿಗೇರಿ ಎಂಬುವವರದ್ದು ಬನಶಂಕರಿ ಕಿರಾಣಿ ಅಂಗಡಿ ಮನೆಯಲ್ಲಿಯೇ ಇದ್ದು, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಮನೆ ವಸ್ತುಗಳಿಗೆ ತಗುಲಿದೆ. ಮನೆಯಲ್ಲಿದ್ದ ತನ್ನ ಮೂರು ಮಕ್ಕಳನ್ನು ಹನುಮಪ್ಪ ಅಬ್ಬಿಗೇರಿ ರಕ್ಷಿಸಲು ಮುಂದಾಗಿದ್ದು, 8 ವರ್ಷದ ಮಗು ಶಂಕರರಾಜನನ್ನು ಹೊರಕ್ಕೆ ಎತ್ತಿಕೊಂಡು ಬಂದಿದ್ದಾರೆ. 11 ವರ್ಷದ ಮಗು ವಿನೋದ ರಾಜನನ್ನು ಸಹ ಹೊರ ತಂದಿದ್ದಾರೆ. ಈ ಬಾಲಕನಿಗೆ ಸುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗು ಎಂಟು ವರ್ಷದ ಜಯರಾಜ ಎಲ್ಲಿದ್ದಾನೆ ಎನ್ನುವುದನ್ನು ಹುಡುಕುವ ವೇಳೆಗೆ ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಜಯರಾಜ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದ್ದಾನೆ</p>.<p>ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಇಒ ರಾಮಣ್ಣ ದೊಡ್ಮನಿ ಹಾಗು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವರದಿ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>