<p><strong>ಯಲಬುರ್ಗಾ: ‘</strong>ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಬೆಳೆಯಬೇಕು’ ಎಂದು ಬಸವಜ್ಯೋತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶರಣಪ್ಪ ಬಳಿಗಾರ ಸಲಹೆ ನೀಡಿದರು.</p>.<p>ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಭಾನುವಾರ ನಡೆದ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಒಳ್ಳೆಯ ಸಾಧಕರ, ದೇಶಭಕ್ತರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವ ಮೂಲಕ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗ್ರಾಮ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಸಪ್ಪ ಅಕ್ಕಿ ಮಾತನಾಡಿ,‘ಓದುವ ಮತ್ತು ಬರೆಯುವ ಹವ್ಯಾಸ ರೂಢಿಸಿಕೊಂಡರೆ ಉಜ್ವಲ ಭವಿಷ್ಯ ರೂಪಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ಗಣ್ಯರಾದ ರಾಜು ಪಲ್ಲೇದ, ಸಿದ್ದಪ್ಪ ಡೊಳ್ಳಿನ, ಚನ್ನಸಂಗಪ್ಪ ಶಿಳ್ಳಿನ ಅತಿಥಿಗಳಾಗಿ ಭಾಗವಹಿಸಿದ್ದರು. ಪಿಡಿಒ ಫಕೀರಪ್ಪ ಕಟ್ಟಿಮನಿ ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕ ಜಗನ್ನಾಥ ಅರ್ಕಸಾಲಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ: ‘</strong>ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಬೆಳೆಯಬೇಕು’ ಎಂದು ಬಸವಜ್ಯೋತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶರಣಪ್ಪ ಬಳಿಗಾರ ಸಲಹೆ ನೀಡಿದರು.</p>.<p>ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಭಾನುವಾರ ನಡೆದ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಒಳ್ಳೆಯ ಸಾಧಕರ, ದೇಶಭಕ್ತರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವ ಮೂಲಕ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗ್ರಾಮ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಸಪ್ಪ ಅಕ್ಕಿ ಮಾತನಾಡಿ,‘ಓದುವ ಮತ್ತು ಬರೆಯುವ ಹವ್ಯಾಸ ರೂಢಿಸಿಕೊಂಡರೆ ಉಜ್ವಲ ಭವಿಷ್ಯ ರೂಪಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ಗಣ್ಯರಾದ ರಾಜು ಪಲ್ಲೇದ, ಸಿದ್ದಪ್ಪ ಡೊಳ್ಳಿನ, ಚನ್ನಸಂಗಪ್ಪ ಶಿಳ್ಳಿನ ಅತಿಥಿಗಳಾಗಿ ಭಾಗವಹಿಸಿದ್ದರು. ಪಿಡಿಒ ಫಕೀರಪ್ಪ ಕಟ್ಟಿಮನಿ ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕ ಜಗನ್ನಾಥ ಅರ್ಕಸಾಲಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>