<p><strong>ಮರಳಿ (ಗಂಗಾವತಿ): </strong>‘ಮಕ್ಕಳ ಹಕ್ಕುಗಳ ಜಾಗೃತಿ ಕುರಿತು ಗ್ರಾ.ಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಬೇಕು. ಇದರಿಂದ ಮಕ್ಕಳ ಸಮಸ್ಯೆಗಳು ಆಲಿಸಲು ಸುಲಭವಾಗುತ್ತದೆ’ ಎಂದು ಮರಳಿಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ಜಂಬಣ್ಣ ತಾಳೂರು ಹೇಳಿದರು.</p>.<p>ತಾಲ್ಲೂಕಿನ ಆಚಾರನರಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಮಕ್ಕಳು ಗ್ರಾಮಸಭೆಯ ಮೂಲಕ ನೇರವಾಗಿ ತಮ್ಮ ಸಮಸ್ಯೆಗಳನ್ನು ಪಂಚಾಯಿತಿಗೆ ತಿಳಿಸಿ ಪರಿಹಾರ ಕಂಡುಕೊಂಡಾಗ ಮಾತ್ರ ಮಕ್ಕಳು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.</p>.<p>ಗ್ರಾ.ಪಂ ಅಧಿಕಾರಿಗಳು ಮಕ್ಕಳ ಸಮಸ್ಯೆಗಳು ಪರಿಹರಿಸುವ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಹಾಗೇ ಗ್ರಾ.ಪಂನಲ್ಲಿ ದೊರಕುವ ಸೌಲಭ್ಯಗಳ ಕುರಿತು ನಡಾವಳಿ ರಚಿಸಿ ಸರ್ಕಾರದ ಗಮನಕ್ಕೆ ತಂದು ಅನುಷ್ಠಾನಗೊಳಿಸಬೇಕು ಎಂದರು.</p>.<p>ಪಿಡಿಒ ಸಲ್ಮಾ ಬೇಗಂ ಮಾತನಾಡಿ, ಮಕ್ಕಳಿಗೆ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.</p>.<p>ನಾಗಪದ್ಮಾವತಿ, ವೆಂಕಟಕನಕ ದುರ್ಗಾರಾವ್, ಬಸವರಾಜಪ್ಪ, ಯುವರಾಜ, ಕೆಂಚಪ್ಪ, ಷಣ್ಮುಖಪ್ಪ, ಲಿಂಗಪ್ಪ ಬರಗೂರು, ಹುಸೆನಮ್ಮ, ಶರಣಪ್ಪ, ಸುಂಕಪ್ಪ, ಸುರೇಶ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಳಿ (ಗಂಗಾವತಿ): </strong>‘ಮಕ್ಕಳ ಹಕ್ಕುಗಳ ಜಾಗೃತಿ ಕುರಿತು ಗ್ರಾ.ಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಬೇಕು. ಇದರಿಂದ ಮಕ್ಕಳ ಸಮಸ್ಯೆಗಳು ಆಲಿಸಲು ಸುಲಭವಾಗುತ್ತದೆ’ ಎಂದು ಮರಳಿಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ಜಂಬಣ್ಣ ತಾಳೂರು ಹೇಳಿದರು.</p>.<p>ತಾಲ್ಲೂಕಿನ ಆಚಾರನರಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಮಕ್ಕಳು ಗ್ರಾಮಸಭೆಯ ಮೂಲಕ ನೇರವಾಗಿ ತಮ್ಮ ಸಮಸ್ಯೆಗಳನ್ನು ಪಂಚಾಯಿತಿಗೆ ತಿಳಿಸಿ ಪರಿಹಾರ ಕಂಡುಕೊಂಡಾಗ ಮಾತ್ರ ಮಕ್ಕಳು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.</p>.<p>ಗ್ರಾ.ಪಂ ಅಧಿಕಾರಿಗಳು ಮಕ್ಕಳ ಸಮಸ್ಯೆಗಳು ಪರಿಹರಿಸುವ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಹಾಗೇ ಗ್ರಾ.ಪಂನಲ್ಲಿ ದೊರಕುವ ಸೌಲಭ್ಯಗಳ ಕುರಿತು ನಡಾವಳಿ ರಚಿಸಿ ಸರ್ಕಾರದ ಗಮನಕ್ಕೆ ತಂದು ಅನುಷ್ಠಾನಗೊಳಿಸಬೇಕು ಎಂದರು.</p>.<p>ಪಿಡಿಒ ಸಲ್ಮಾ ಬೇಗಂ ಮಾತನಾಡಿ, ಮಕ್ಕಳಿಗೆ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.</p>.<p>ನಾಗಪದ್ಮಾವತಿ, ವೆಂಕಟಕನಕ ದುರ್ಗಾರಾವ್, ಬಸವರಾಜಪ್ಪ, ಯುವರಾಜ, ಕೆಂಚಪ್ಪ, ಷಣ್ಮುಖಪ್ಪ, ಲಿಂಗಪ್ಪ ಬರಗೂರು, ಹುಸೆನಮ್ಮ, ಶರಣಪ್ಪ, ಸುಂಕಪ್ಪ, ಸುರೇಶ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>