<p><strong>ಗಂಗಾವತಿ: </strong>ನಗರದಲ್ಲಿ ಅಮೃತ ಸಿಟಿ ಯೋಜನೆಯಡಿ ನಿರ್ಮಾಣ ಆಗುತ್ತಿರುವ ₹ 3 ಕೋಟಿ ವೆಚ್ಚದ ನೂತನ ನಗರಸಭೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ನಂತರ ಮಾತನಾಡಿ, ನಾಲ್ಕು ವರ್ಷಗಳ ಹಿಂದೇ ಆರಂಭವಾದ ನಗರಸಭೆ ಕಟ್ಟಡ ನಿರ್ಮಾಣ ಕಾಮಗಾರಿ ಕೋವಿಡ್ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ನನಗುದಿಗೆ ಬಿದ್ದಿತ್ತು.</p>.<p>ಇದೀಗ ಕಟ್ಟಡ ನಿರ್ಮಾಣ ಕಾಮಗಾರಿ ಶೇ 60ರಷ್ಟು ಪೂರ್ಣವಾಗಿದ್ದು, ಗುತ್ತಿಗೆದಾರನಿಗೆ ₹ 1.70 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಗೇ ನಗರೋತ್ಥಾನ ಯೋಜನೆಯಡಿ ಹೆಚ್ಚುವರಿ ಕಾಮಗಾರಿಗಾಗಿ ₹ 1.5 ಕೋಟಿ ಮಂಜೂರು ಆಗಿದೆ.</p>.<p>ಇನ್ನೂ ವಿದ್ಯುತ್ ಮತ್ತು ನೀರಿನ ವ್ಯವಸ್ಥೆಗೆ ₹ 25 ಲಕ್ಷ ನಗರಸಭೆ ಉಳಿತಾಯ ಬಜೆಟ್ ಬಳಕೆ ಮಾಡಲಾಗಿದೆ. ಹಾಗೇ ಹಿರಿಯ ನಾಗರಿಕರ ಮತ್ತು ಅಂಗವಿಕಲರ ಅನುಕೂಲಕ್ಕಾಗಿ ರ್ಯಾಂಪ್ ನಿರ್ಮಿಸುವಂತೆ ಸೂಚನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಈಗಾಗಲೇ ಕಟ್ಟದ ನಿರ್ಮಾಣ ಕಾಮಗಾರಿ ವಿಳಂಬವಾಗಿ ಹಲವು ವರ್ಷಗಳು ಗತಿಸಿವೆ. ಇನ್ನೂ ಐದು ತಿಂಗಳಲ್ಲಿ ನಗರಸಭೆ ಕಟ್ಟಡ ಉದ್ಘಾಟನೆ ಮಾಡುವ ಹಂತಕ್ಕೆ ತರಬೇಕು ಎಂದು ಹೇಳಿದರು.</p>.<p>ಎಇಇ ಅಭಿಷೇಕ ಮಾತನಾಡಿ, ನಗರಸಭೆಗೆ ಬಣ್ಣ, ವಿದ್ಯುತ್ ಪಿಠೋಪಕರಣ, ಒಳಗಾಂಗಣ ವಿನ್ಯಾಸಕ್ಕೆ ₹ 50ಲಕ್ಷ ಅಗತ್ಯವಿದ್ದು, ಅದನ್ನು ನಗರೋತ್ಥಾನ ಯೋಜನೆಯಡಿ ಬಳಸಿಕೊಳ್ಳಲು ಅವಕಾಶವಿದೆ ಎಂದರು.</p>.<p>ಈ ವೇಳೆಯಲ್ಲಿ ನಗರಪ್ರಾಧಿಕಾರ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ನಗರಸಭೆ ಸದಸ್ಯ ನವೀನ್ ಮಾಲಿ ಪಾಟೀಲ್, ಉಮೇಶ್ ಸಿಂಗನಾಳ, ಪರಶುರಾಮ ಮಡ್ಡೇರಾ, ಅಜಯ್ ಬಿಚ್ಚಾಲಿ, ವಾಸುದೇವ ನವಲಿ, ಶರಭೋಜಿರಾವ್ ಗಾಯಕ್ವಾಡ್, ನೀಲಕಂಟಪ್ಪ ಕಟ್ಟಿಮನಿ, ರಾಚಪ್ಪ ಸಿದ್ದಪುರ, ಜೆಇ ಶಂಕರಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ನಗರದಲ್ಲಿ ಅಮೃತ ಸಿಟಿ ಯೋಜನೆಯಡಿ ನಿರ್ಮಾಣ ಆಗುತ್ತಿರುವ ₹ 3 ಕೋಟಿ ವೆಚ್ಚದ ನೂತನ ನಗರಸಭೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ನಂತರ ಮಾತನಾಡಿ, ನಾಲ್ಕು ವರ್ಷಗಳ ಹಿಂದೇ ಆರಂಭವಾದ ನಗರಸಭೆ ಕಟ್ಟಡ ನಿರ್ಮಾಣ ಕಾಮಗಾರಿ ಕೋವಿಡ್ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ನನಗುದಿಗೆ ಬಿದ್ದಿತ್ತು.</p>.<p>ಇದೀಗ ಕಟ್ಟಡ ನಿರ್ಮಾಣ ಕಾಮಗಾರಿ ಶೇ 60ರಷ್ಟು ಪೂರ್ಣವಾಗಿದ್ದು, ಗುತ್ತಿಗೆದಾರನಿಗೆ ₹ 1.70 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಗೇ ನಗರೋತ್ಥಾನ ಯೋಜನೆಯಡಿ ಹೆಚ್ಚುವರಿ ಕಾಮಗಾರಿಗಾಗಿ ₹ 1.5 ಕೋಟಿ ಮಂಜೂರು ಆಗಿದೆ.</p>.<p>ಇನ್ನೂ ವಿದ್ಯುತ್ ಮತ್ತು ನೀರಿನ ವ್ಯವಸ್ಥೆಗೆ ₹ 25 ಲಕ್ಷ ನಗರಸಭೆ ಉಳಿತಾಯ ಬಜೆಟ್ ಬಳಕೆ ಮಾಡಲಾಗಿದೆ. ಹಾಗೇ ಹಿರಿಯ ನಾಗರಿಕರ ಮತ್ತು ಅಂಗವಿಕಲರ ಅನುಕೂಲಕ್ಕಾಗಿ ರ್ಯಾಂಪ್ ನಿರ್ಮಿಸುವಂತೆ ಸೂಚನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಈಗಾಗಲೇ ಕಟ್ಟದ ನಿರ್ಮಾಣ ಕಾಮಗಾರಿ ವಿಳಂಬವಾಗಿ ಹಲವು ವರ್ಷಗಳು ಗತಿಸಿವೆ. ಇನ್ನೂ ಐದು ತಿಂಗಳಲ್ಲಿ ನಗರಸಭೆ ಕಟ್ಟಡ ಉದ್ಘಾಟನೆ ಮಾಡುವ ಹಂತಕ್ಕೆ ತರಬೇಕು ಎಂದು ಹೇಳಿದರು.</p>.<p>ಎಇಇ ಅಭಿಷೇಕ ಮಾತನಾಡಿ, ನಗರಸಭೆಗೆ ಬಣ್ಣ, ವಿದ್ಯುತ್ ಪಿಠೋಪಕರಣ, ಒಳಗಾಂಗಣ ವಿನ್ಯಾಸಕ್ಕೆ ₹ 50ಲಕ್ಷ ಅಗತ್ಯವಿದ್ದು, ಅದನ್ನು ನಗರೋತ್ಥಾನ ಯೋಜನೆಯಡಿ ಬಳಸಿಕೊಳ್ಳಲು ಅವಕಾಶವಿದೆ ಎಂದರು.</p>.<p>ಈ ವೇಳೆಯಲ್ಲಿ ನಗರಪ್ರಾಧಿಕಾರ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ನಗರಸಭೆ ಸದಸ್ಯ ನವೀನ್ ಮಾಲಿ ಪಾಟೀಲ್, ಉಮೇಶ್ ಸಿಂಗನಾಳ, ಪರಶುರಾಮ ಮಡ್ಡೇರಾ, ಅಜಯ್ ಬಿಚ್ಚಾಲಿ, ವಾಸುದೇವ ನವಲಿ, ಶರಭೋಜಿರಾವ್ ಗಾಯಕ್ವಾಡ್, ನೀಲಕಂಟಪ್ಪ ಕಟ್ಟಿಮನಿ, ರಾಚಪ್ಪ ಸಿದ್ದಪುರ, ಜೆಇ ಶಂಕರಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>