<p><strong>ಕುಷ್ಟಗಿ:</strong> ವಿವಿಧ ಬೇಡಿಕೆಗಳ ಈಡೇರಿಕಗೆ ಒತ್ತಾಯಿಸಿ ಇಲ್ಲಿಯ ಪೌರಸೇವಾ ನೌಕರರು ಮತ್ತು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಪುರಸಭೆ ಕಚೇರಿ ಬಳಿ ಧರಣಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಬಹುದಿನಗಳಿಂದಲೂ ಈಡೇರದೆ ಉಳಿದಿರುವ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಹಾಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮಂಜಸವಾಗಿರುವ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದರು.</p>.<p>ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಅಧ್ಯಕ್ಷ ಮಹಾಂತೇಶ ಕಲಭಾವಿ ಧರಣಿಗೆ ಬೆಂಬಲ ವ್ಯಕ್ತಪಡಿಸಿದರು. </p>.<p>ಈ ಸಂದರ್ಭದಲ್ಲಿ ಪೌರಸೇವಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಪ್ಪ, ಉಪಾಧ್ಯಕ್ಷ ಚಿರಂಜೀವಿ ದೊಡ್ಡಮನಿ, ಕಾರ್ಯದರ್ಶಿ ರವಿ ಹಿರೇಮನಿ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು, ಸದಸ್ಯ ಇದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಸದಸ್ಯರು ಭೇಟಿ ನೀಡಿ ಬೆಂಬಲ ಸೂಚಿಸಿದರು.</p>.<p>ಬೇಡಿಕೆ ಈಡೇರಿಸುವ ಕುರಿತು ಸರ್ಕಾರದ ಲಿಖಿತ ಹೇಳಿಕೆ ಬರುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ವಿವಿಧ ಬೇಡಿಕೆಗಳ ಈಡೇರಿಕಗೆ ಒತ್ತಾಯಿಸಿ ಇಲ್ಲಿಯ ಪೌರಸೇವಾ ನೌಕರರು ಮತ್ತು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಪುರಸಭೆ ಕಚೇರಿ ಬಳಿ ಧರಣಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಬಹುದಿನಗಳಿಂದಲೂ ಈಡೇರದೆ ಉಳಿದಿರುವ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಹಾಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮಂಜಸವಾಗಿರುವ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದರು.</p>.<p>ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಅಧ್ಯಕ್ಷ ಮಹಾಂತೇಶ ಕಲಭಾವಿ ಧರಣಿಗೆ ಬೆಂಬಲ ವ್ಯಕ್ತಪಡಿಸಿದರು. </p>.<p>ಈ ಸಂದರ್ಭದಲ್ಲಿ ಪೌರಸೇವಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಪ್ಪ, ಉಪಾಧ್ಯಕ್ಷ ಚಿರಂಜೀವಿ ದೊಡ್ಡಮನಿ, ಕಾರ್ಯದರ್ಶಿ ರವಿ ಹಿರೇಮನಿ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು, ಸದಸ್ಯ ಇದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಸದಸ್ಯರು ಭೇಟಿ ನೀಡಿ ಬೆಂಬಲ ಸೂಚಿಸಿದರು.</p>.<p>ಬೇಡಿಕೆ ಈಡೇರಿಸುವ ಕುರಿತು ಸರ್ಕಾರದ ಲಿಖಿತ ಹೇಳಿಕೆ ಬರುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>