ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಹೇಮಂತ್ ಎನ್. (2020ನೇ ಬ್ಯಾಚ್) ಅವರು ಪರೀಕ್ಷೆಗಳ ಹಂತಗಳು, ಭಾಷೆ ಹಾಗೂ ಐಚ್ಛಿಕ ವಿಷಯಗಳ ಆಯ್ಕೆ, ಪ್ರಿಲಿಮ್ಸ್ ಹಾಗೂ ಮೇನ್ಸ್ ಪರೀಕ್ಷೆಗಳಿಗೆ ಅಧ್ಯಯನ ನಡೆಸಬೇಕಾದ ವಿಷಯಗಳು, ಪ್ರಕಾರಗಳು, ವ್ಯಕ್ತಿತ್ವ ಪರೀಕ್ಷೆ ಎದುರಿಸುವುದು ಮುಂತಾದ ವಿಷಯಗಳ ಕುರಿತು ತಮ್ಮ ಅನುಭವಗಳ ಸಹಿತ ವಿವರಣೆಗಳನ್ನುನೀಡಿದರು.