<p><strong>ಯಲಬುರ್ಗಾ:</strong> ವಸತಿ ನಿಲಯದ ಆವರಣ ಹಾಗೂ ಅಲ್ಲಿಯ ಶೌಚಾಲಯವನ್ನು ಸ್ವಚ್ಛಗೊಳಿಸಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿ.ಕೆ. ಬಡಿಗೇರ ನಡೆದುಕೊಂಡಿದ್ದಾರೆ.</p>.<p>ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಮೆಟ್ರಿಕ್ ಪೂರ್ವ ವಸತಿ ನೀಲಯಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಕೈಯಲ್ಲಿ ಪೊರಕಿ ಹಿಡಿದು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.</p>.<p>ಇದನ್ನು ಗಮನಿಸಿದ ಇತರೆ ಸಿಬ್ಬಂದಿ ಅವರೊಂದಿಗೆ ಕೈ ಜೋಡಿಸಿ ಸಂಪೂರ್ಣ ಸ್ವಚ್ಛಮಾಡಿದರು.</p>.<p>ನಂತರ ಮಾತನಾಡಿದ ಅಧಿಕಾರಿ ವಿ.ಕೆ. ಬಡಿಗೇರ, ವಾಸಿಸುವ ಪರಿಸರ, ಮುಖ್ಯವಾಗಿ ಶೌಚಾಲಯ ಪ್ರದೇಶವು ಮಾತ್ರ ಸಂಪೂರ್ಣ ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳಬೇಕು. ನಿಲಯಪಾಲಕರು, ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಪ್ರತಿಯೊಬ್ಬರ ಸಹಭಾಗಿತ್ವದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಯಾರು ಮರೆಯುವಂತಿಲ್ಲ ಎಂದ ಅವರು ಕೊನೆಗೆ ಮಕ್ಕಳಿಗೆ ಪ್ರತಿಜ್ಞಾವಿಧಿ<br />ಬೋಧಿಸಿದರು.</p>.<p>ವಸತಿ ನಿಲಯದ ಮೇಲ್ವಿಚಾರಕ ವೀರಯ್ಯ ಕಾಟಾಪೂರಮಠ ಮಾತನಾಡಿ, ಅಧಿಕಾರಿಗಳೇ ಸ್ವಚ್ಛತೆಗೆ ಮುಂದಾಗಿದ್ದು ಇತರೆ ಸಿಬ್ಬಂದಿಗೆ ಪ್ರೇರಣೆಯಾಗಿದೆ. ಅಧಿಕಾರಿಗಳ ಕ್ರಿಯಾಶೀಲ ವ್ಯಕ್ತಿತ್ವ ನಮಗೂ ಪ್ರೇರಣೆಯಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ ವಸತಿ ನಿಲಯದಲ್ಲಿ ಉತ್ತಮ ವಾತಾವರಣ ನೆಲೆಗೊಳ್ಳುವಂತೆ ಮಾಡಲಾಗುವುದು ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ವಸತಿ ನಿಲಯದ ಆವರಣ ಹಾಗೂ ಅಲ್ಲಿಯ ಶೌಚಾಲಯವನ್ನು ಸ್ವಚ್ಛಗೊಳಿಸಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿ.ಕೆ. ಬಡಿಗೇರ ನಡೆದುಕೊಂಡಿದ್ದಾರೆ.</p>.<p>ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಮೆಟ್ರಿಕ್ ಪೂರ್ವ ವಸತಿ ನೀಲಯಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಕೈಯಲ್ಲಿ ಪೊರಕಿ ಹಿಡಿದು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.</p>.<p>ಇದನ್ನು ಗಮನಿಸಿದ ಇತರೆ ಸಿಬ್ಬಂದಿ ಅವರೊಂದಿಗೆ ಕೈ ಜೋಡಿಸಿ ಸಂಪೂರ್ಣ ಸ್ವಚ್ಛಮಾಡಿದರು.</p>.<p>ನಂತರ ಮಾತನಾಡಿದ ಅಧಿಕಾರಿ ವಿ.ಕೆ. ಬಡಿಗೇರ, ವಾಸಿಸುವ ಪರಿಸರ, ಮುಖ್ಯವಾಗಿ ಶೌಚಾಲಯ ಪ್ರದೇಶವು ಮಾತ್ರ ಸಂಪೂರ್ಣ ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳಬೇಕು. ನಿಲಯಪಾಲಕರು, ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಪ್ರತಿಯೊಬ್ಬರ ಸಹಭಾಗಿತ್ವದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಯಾರು ಮರೆಯುವಂತಿಲ್ಲ ಎಂದ ಅವರು ಕೊನೆಗೆ ಮಕ್ಕಳಿಗೆ ಪ್ರತಿಜ್ಞಾವಿಧಿ<br />ಬೋಧಿಸಿದರು.</p>.<p>ವಸತಿ ನಿಲಯದ ಮೇಲ್ವಿಚಾರಕ ವೀರಯ್ಯ ಕಾಟಾಪೂರಮಠ ಮಾತನಾಡಿ, ಅಧಿಕಾರಿಗಳೇ ಸ್ವಚ್ಛತೆಗೆ ಮುಂದಾಗಿದ್ದು ಇತರೆ ಸಿಬ್ಬಂದಿಗೆ ಪ್ರೇರಣೆಯಾಗಿದೆ. ಅಧಿಕಾರಿಗಳ ಕ್ರಿಯಾಶೀಲ ವ್ಯಕ್ತಿತ್ವ ನಮಗೂ ಪ್ರೇರಣೆಯಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ ವಸತಿ ನಿಲಯದಲ್ಲಿ ಉತ್ತಮ ವಾತಾವರಣ ನೆಲೆಗೊಳ್ಳುವಂತೆ ಮಾಡಲಾಗುವುದು ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>