ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾದಚಾರಿ ಮಾರ್ಗ ಒತ್ತುವರಿ ತೆರವು ಇಂದಿನಿಂದ’

Last Updated 10 ಆಗಸ್ಟ್ 2021, 12:09 IST
ಅಕ್ಷರ ಗಾತ್ರ

ಗಂಗಾವತಿ: ‘ನಗರದ ವಿವಿಧ ರಸ್ತೆಗಳಲ್ಲಿ ಬುಧವಾರ (ಆ.11) ಬೆಳಿಗ್ಗೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡಲಾಗುವುದು’ ಎಂದು ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ತಿಳಿಸಿದ್ದಾರೆ.

ಬೀದಿಬದಿ ವ್ಯಾಪಾರಿಗಳು ನಗರದ ಗುಂಡಮ್ಮ ಕ್ಯಾಂಪ್‌ನ ಸಿ.ಟಿ. ಮಾರುಕಟ್ಟೆ ಆವರಣಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿತ್ತು. 10 ದಿನಗಳ ಗಡುವು ನೀಡಲಾಗಿತ್ತು. ಆದರೂ ಪ್ರಯೋಜನವಾಗಿಲ್ಲ. ಪಾದಚಾರಿ ಮಾರ್ಗಗಳ ಮೇಲೆಯೇ ವ್ಯಾಪಾರ ಮಾಡುತ್ತಿದ್ದಾರೆ ಎಂದು ಇಲ್ಲಿ ಸುದ್ದಿಗಾರರಿಗೆ ಹೇಳಿದರು.

ಇದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದೆ. ಸಾಕಷ್ಟು ಅಪಘಾತಗಳು ಸಹ ಸಂಭವಿಸಿವೆ ಎಂದರು.

ಆದ್ದರಿಂದ ಬಿಗಿ ಬಂದೋಬಸ್ತ್‌ನಲ್ಲಿ ಒತ್ತುವರಿ ತೆರವು ಕಾರ್ಯಚರಣೆ ನಡೆಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT