ಕುಷ್ಟಗಿ: ಇಲ್ಲಿ ಆಯೋಜನೆಯಾಗಿರುವ ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಅವರುರಸ್ತೆ ಮಾರ್ಗದ ಮೂಲಕ ಹೊಸಪೇಟೆಯಿಂದ ಕುಷ್ಟಗಿಗೆ ಬರಲಿದ್ದಾರೆ.
ಕಾರ್ಯಕ್ರಮ ಮಧ್ಯಾಹ್ನ ಮೂರು ಗಂಟೆಗೆ ನಿಗದಿಯಾಗಿತ್ತು. ಇಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆ ಬರುವ ಆತಂಕ ಇರುವ ಕಾರಣ ಹೆಲಿಕಾಪ್ಟರ್ ಬದಲು ರಸ್ತೆ ಮಾರ್ಗದ ಮೂಲಕ ಬರಲಿದ್ದಾರೆ.